Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:3 - ಪರಿಶುದ್ದ ಬೈಬಲ್‌

3 ಆಗ ಯೆಹೋವನು, “ಮೂರು ವರ್ಷಗಳ ತನಕ ನನ್ನ ಸೇವಕನಾದ ಯೆಶಾಯನು ಬಟ್ಟೆ ಇಲ್ಲದೆ, ಪಾದರಕ್ಷೆ ಇಲ್ಲದೆ ನಡೆದಾಡಿದ್ದಾನೆ. ಇದು ಈಜಿಪ್ಟಿಗೂ ಇಥಿಯೋಪ್ಯಕ್ಕೂ ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಹೀಗೆ ಹೇಳಿದನು, “ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಆಶ್ಚರ್ಯವಾದ ಗುರುತಾಗಿ ಮೂರು ವರ್ಷ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ನಡೆದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ : “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:3
16 ತಿಳಿವುಗಳ ಹೋಲಿಕೆ  

“ನಾನೂ ನನ್ನ ಮಕ್ಕಳೂ ಇಸ್ರೇಲ್ ಜನರಿಗೆ ಒಂದು ಗುರುತಾಗಿದ್ದೇವೆ. ಸರ್ವಶಕ್ತನಾದ ಯೆಹೋವನು ನಮ್ಮನ್ನು ಕಳುಹಿಸಿದ್ದಾನೆ. ಆತನು ಚೀಯೋನ್ ಬೆಟ್ಟದಲ್ಲಿ ವಾಸಿಸುತ್ತಾನೆ.”


ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.


ನೀವು ಆ ದೇಶವನ್ನು ಸಂಚರಿಸಿ ನೋಡಿದ ನಲವತ್ತು ದಿನಗಳಿಗೆ ಸಮನಾಗಿ, ದಿನ ಒಂದಕ್ಕೆ ಒಂದು ಸಂವತ್ಸರದ ಮೇರೆಗೆ ನಲವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸುವಿರಿ. ನನ್ನನ್ನು ತಿರಸ್ಕರಿಸುವುದೆಂದರೆ ಏನೆಂಬುದು ನಿಮಗೆ ಗೊತ್ತಾಗುತ್ತದೆ.’


ಆ ಬಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನ್ನು ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ಈ ರೀತಿಯಾಗಿ ನೀನು ಆ ನಗರಕ್ಕೆ ವಿರುದ್ಧವಾಗಿರುವಂತೆ ಕಂಡುಬರುವೆ. ನೀನು ಆ ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಬ್ರದಲ್ಲೇ ಏನು ಸಂಭವಿಸುತ್ತದೆ ಎಂಬುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.


ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”


“‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು: ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್‌ನಿಂದ ಹಿಡಿದು ಅಸ್ವಾನ್ ತನಕ ಸಾಯುವರು. ಇದು ನನ್ನ ಒಡೆಯನಾದ ಯೆಹೋವನ ನುಡಿ.


ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.


ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಹೇಳುವುದೇನೆಂದರೆ: “ನಾನು ಈಜಿಪ್ಟನ್ನು ಕಠಿಣನಾದ ಒಡೆಯನಿಗೆ ಒಪ್ಪಿಸುವೆನು. ಬಲಿಷ್ಠ ಒಡೆಯನು ಅವರನ್ನು ಆಳುವನು.”


ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೊ.”


“ನರಪುತ್ರನೇ, ಒಂದು ಇಟ್ಟಿಗೆಯನ್ನು ತೆಗೆದುಕೊ, ಅದನ್ನು ನಿನ್ನ ಮುಂದೆ ಇಟ್ಟು ಅದರ ಮೇಲೆ ಒಂದು ಚಿತ್ರವನ್ನು ಅಂದರೆ ಜೆರುಸಲೇಮ್ ನಗರದ ಚಿತ್ರವನ್ನು ಕೊರೆ.


ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು.


ಇಥಿಯೋಪ್ಯದ ಜನರೇ, ಇದರಲ್ಲಿ ನೀವೂ ಸೇರಿರುವಿರಿ. ಯೆಹೋವನ ಕತ್ತಿಯು ನಿಮ್ಮ ಜನರೆಲ್ಲರನ್ನು ಕೊಲ್ಲುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು