Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 20:6 - ಪರಿಶುದ್ದ ಬೈಬಲ್‌

6 ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 20:6
16 ತಿಳಿವುಗಳ ಹೋಲಿಕೆ  

ನಮಗೆ ದಯಪಾಲಿಸಲ್ಪಟ್ಟ ಈ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ದಂಡನೆಯಂತೂ ಖಂಡಿತ. ಇದು ಪ್ರಭುವಿನಿಂದ ಮೊದಲು ಹೇಳಲ್ಪಟ್ಟಿತು. ಆತನಿಂದ ಕೇಳಿದವರೇ ಈ ರಕ್ಷಣೆಯ ಕುರಿತಾಗಿ ನಮಗೆ ಸ್ಥಿರಪಡಿಸಿದರು.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


“ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!


ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ನಿರಪರಾಧಿಗಳನ್ನು ರಕ್ಷಿಸುವನು. ನೀನು ಪರಿಶುದ್ಧನಾಗಿರುವುದರಿಂದ ನಿನ್ನ ಪ್ರಾರ್ಥನೆಗೆ ಉತ್ತರವಾಗಿ ಆತನು ಅವರನ್ನು ಕ್ಷಮಿಸುವನು.”


ನೀರು ಸಿಗುವುದೆಂದು ಅವರು ನಂಬಿಕೊಂಡಿದ್ದರೂ ಅವರಿಗೆ ನಿರಾಶೆಯಾಯಿತು.


ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು