Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:11 - ಪರಿಶುದ್ದ ಬೈಬಲ್‌

11 ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್‌ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ದೂಮ’ ಕುರಿತ ದೈವೋಕ್ತಿ : “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೂಮದ ವಿಷಯವಾದ ದೈವೋಕ್ತಿ. ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು, ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು ಎಂಬ ಕೂಗು ಸೇಯೀರಿನಿಂದ ನನಗೆ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:11
24 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.


ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.


ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.


ಯೆಹೋವನೇ ನಿಶ್ಚಯವಾಗಿ ಎದೋಮ್ಯರನ್ನು ದಂಡಿಸು. ಯಾಕೆಂದರೆ ಜೆರುಸಲೇಮ್ ಸೆರೆಹಿಡಿಯಲ್ಪಟ್ಟಾಗ ಅವರು, “ಅದರ ಕಟ್ಟಡಗಳನ್ನು ಕೆಡವಿಹಾಕಿ. ಅವುಗಳನ್ನು ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಆರ್ಭಟಿಸಿದರು.


ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ.


ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.


ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ


ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.


ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೋ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.


ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.


ಏಸಾವನಿಗೆ ಈ ಸಂಗತಿಗಳನ್ನು ತಿಳಿಸಿದನು: “ನಿನ್ನ ಸೇವಕನಾದ ಯಾಕೋಬನು ಹೇಳುವುದೇನೆಂದರೆ, ‘ನಾನು ಕಳೆದ ವರ್ಷಗಳೆಲ್ಲಾ ಲಾಬಾನನೊಡನೆ ಜೀವಿಸಿದೆನು.


ಯೆಹೂದದ ಜನರಿಗೆ ಈ ಊರುಗಳನ್ನು ಸಹ ಕೊಡಲಾಯಿತು: ಅರಬ್, ದೂಮಾ, ಎಷಾನ್,


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”


“ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು