Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 21:4 - ಪರಿಶುದ್ದ ಬೈಬಲ್‌

4 ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ. ನನ್ನ ಆನಂದದ ರಾತ್ರಿಯು ಭಯಂಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ಭ್ರಮೆಗೊಂಡಿದೆ, ನಡುಕವು ನನ್ನನ್ನು ಆಕ್ರವಿುಸಿದೆ, ನಾನು ಅಪೇಕ್ಷಿಸುತ್ತಿದ್ದ ಸಂಜೆಹೊತ್ತೇ ನನಗೆ ಭಯಂಕರವಾಗಿ ಪರಿಣವಿುಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 21:4
19 ತಿಳಿವುಗಳ ಹೋಲಿಕೆ  

ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಆಗ ಫಕ್ಕನೆ ಮನುಷ್ಯನ ಕೈಯೊಂದು ಕಾಣಿಸಿಕೊಂಡು ಗೋಡೆಯ ಮೇಲೆ ಬರೆಯುವದಕ್ಕೆ ಪ್ರಾರಂಭಿಸಿತು. ಬೆರಳುಗಳು ಗೋಡೆಯ ಸುಣ್ಣದ ಮೇಲೆ ಅಕ್ಷರಗಳನ್ನು ಕೊರೆದವು. ಆ ಕೈಯು ದೀಪಸ್ತಂಭದ ಹತ್ತಿರ ಅರಮನೆಯ ಗೋಡೆಯ ಮೇಲೆ ಅರಸನ ಕಣ್ಣೆದುರಿನಲ್ಲಿಯೇ ಬರೆಯಿತು.


ರಾಜನಾದ ಬೇಲ್ಶಚ್ಚರನು ತನ್ನ ಒಂದು ಸಾವಿರ ಜನ ಅಧಿಕಾರಿಗಳಿಗೆ ಒಂದು ಔತಣವನ್ನು ಕೊಟ್ಟನು. ರಾಜನು ಅವರ ಜೊತೆ ದ್ರಾಕ್ಷಾರಸವನ್ನು ಪಾನ ಮಾಡುತ್ತಿದ್ದನು.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.


“ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ, “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗಿ ಬರಲು ಆಮಂತ್ರಿಸಿರುತ್ತಾಳೆ.


ಮುಂಜಾನೆಯಲ್ಲಿ ನೀವು, ‘ಇದು ಸಾಯಂಕಾಲವಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ಸಾಯಂಕಾಲದಲ್ಲಿ, ‘ಇದು ಮುಂಜಾನೆಯಾಗಿದ್ದರೆ ಉತ್ತಮವಾಗಿರುತ್ತಿತ್ತು’ ಎಂದು ಅನ್ನುವಿರಿ. ನಿಮ್ಮ ಹೃದಯದಲ್ಲಿರುವ ಭಯ ಮತ್ತು ನೀವು ಕಣ್ಣಾರೆ ಕಾಣುವ ಭಯಂಕರ ಸಂಗತಿಗಳೇ ಇದಕ್ಕೆ ಕಾರಣ.


ಅದೇ ರಾತ್ರಿ ಕಸ್ದೀಯರ ರಾಜನಾದ ಬೇಲ್ಶಚ್ಚರನ ಕೊಲೆಯಾಯಿತು.


ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.


ನಾನು ಭಯದಿಂದ ನಡುಗುತ್ತಿದ್ದೇನೆ. ನಾನು ದಿಗಿಲುಗೊಂಡಿದ್ದೇನೆ.


ಆಗ ಅದೋನೀಯನ ಅತಿಥಿಗಳೆಲ್ಲರೂ ಭಯಗೊಂಡು ಓಡಿಹೋದರು.


ಆಹಾ, ನನಗೆ ಪಾರಿವಾಳದಂತೆ ರೆಕ್ಕೆಗಳಿದ್ದರೆ, ನಾನು ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.


ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು