Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:15 - ಪರಿಶುದ್ದ ಬೈಬಲ್‌

15 ನನ್ನ ಒಡೆಯನೂ ಸರ್ವಶಕ್ತನೂ ಆದ ಯೆಹೋವನು, “ಸೇವಕನಾದ ಶೆಬ್ನನ ಬಳಿಗೆ ಹೋಗು. ಅವನು ಅರಮನೆಯ ಮೇಲ್ವಿಚಾರಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ, “ಹೋಗು, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ನುಡಿದಿದ್ದಾನೆ - ನಡೆ, ಅರಮನೆಯ ಮೇಲ್ವಿಚಾರಕನಾದ ಶೆಬ್ನನೆಂಬ ಈ ಅಧ್ಯಕ್ಷನ ಬಳಿಗೆ ಹೋಗಿ ಅವನಿಗೆ ಹೇಳತಕ್ಕದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:15
12 ತಿಳಿವುಗಳ ಹೋಲಿಕೆ  

ಜೆರುಸಲೇಮಿನಿಂದ ಮೂರು ಮಂದಿ ಸೇನಾದಂಡನಾಯಕನೊಂದಿಗೆ ಮಾತನಾಡಲು ಹೊರಟರು. ಅವರು ಯಾರೆಂದರೆ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಆಸಾಫನ ಮಗನಾದ ಯೋವ ಮತ್ತು ಶೆಬ್ನ. ಎಲ್ಯಾಕೀಮನು ಅರಮನೆಯ ಆಡಳಿತಗಾರನಾಗಿದ್ದನು; ಯೋವನು ದಾಖಲೆಕಾರನಾಗಿದ್ದನು; ಶೆಬ್ನ ಅರಮನೆಯ ಕಾರ್ಯದರ್ಶಿಯಾಗಿದ್ದನು.


ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.


ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.


ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.


ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.


ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.


ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ಸೇನಾದಂಡನಾಯಕನಿಗೆ, “ದಯಮಾಡಿ ನಮ್ಮೊಂದಿಗೆ ಅರಮೇಯಿಕ್ ಭಾಷೆಯಲ್ಲಿ ಮಾತನಾಡು. ಆ ಭಾಷೆಯು ನಮಗೆ ಗೊತ್ತು. ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ. ನೀವು ನಮ್ಮ ಭಾಷೆಯಲ್ಲಿ ಮಾತನಾಡಿದರೆ ಗೋಡೆಯ ಮೇಲಿರುವ ನಮ್ಮ ಜನರು ತಿಳಿದುಕೊಳ್ಳುವರು” ಎಂದು ಹೇಳಿದರು.


ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.


ನಂತರ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬುವರು ಸೇನಾಧಿಪತಿಗೆ, “ದಯವಿಟ್ಟು ನಮ್ಮೊಂದಿಗೆ ಅರಾಮ್ಯರ ಭಾಷೆಯಲ್ಲಿ ಮಾತನಾಡು. ನಾವು ಆ ಭಾಷೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಗೋಡೆಯ ಮೇಲಿರುವ ಜನರಿಗೆ ನಮ್ಮ ಮಾತುಗಳು ಕೇಳುವುದರಿಂದ ಯೆಹೂದದ ಭಾಷೆಯಲ್ಲಿ ನಮ್ಮೊಂದಿಗೆ ಮಾತನಾಡಬೇಡ” ಎಂದು ಹೇಳಿದರು.


ಅಹಾಬನ ಮನೆಯನ್ನು ನೋಡಿಕೊಳ್ಳುವ ಗೃಹಾಧಿಕಾರಿ, ನಗರವನ್ನು ನಿಯಂತ್ರಿಸುವ ನಗರಾಧಿಕಾರಿ, ಹಿರಿಯರು ಮತ್ತು ಅಹಾಬನ ಮಕ್ಕಳ ಪಾಲಕರಾದ ಜನರೆಲ್ಲರೂ ಯೇಹುವಿಗೆ ಈ ಸಂದೇಶವನ್ನು ಕಳುಹಿಸಿದರು: “ನಾವು ನಿನ್ನ ಸೇವಕರು. ನೀನು ನಮಗೆ ಹೇಳುವುದನ್ನೆಲ್ಲಾ ನಾವು ಮಾಡುತ್ತೇವೆ. ನಾವು ಯಾರನ್ನೂ ರಾಜನನ್ನಾಗಿ ಮಾಡುವುದಿಲ್ಲ. ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು.”


ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು. ಅಬ್ದನ ಮಗನಾದ ಅದೋನೀರಾಮ; ಅದೋನೀರಾಮನು ಗುಲಾಮರ ಮೇಲ್ವಿಚಾರಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು