Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:2 - ಪರಿಶುದ್ದ ಬೈಬಲ್‌

2 ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಊರೇ! ನಿನ್ನಲ್ಲಿ ಹತರಾದವರು ಖಡ್ಗಹತರಲ್ಲ, ಯುದ್ಧದಲ್ಲಿ ಮೃತರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:2
16 ತಿಳಿವುಗಳ ಹೋಲಿಕೆ  

ನನ್ನ ಜನರ ದೇಶಕ್ಕಾಗಿ ಕೂಗಿರಿ. ಯಾಕೆಂದರೆ ಅದರಲ್ಲಿ ಕೇವಲ ಹಣಜಿಯೂ ಮುಳ್ಳುಗಿಡಗಳೂ ಬೆಳೆಯುತ್ತವೆ. ಒಂದು ಕಾಲದಲ್ಲಿ ಸಂತೋಷಭರಿತವಾಗಿದ್ದ ಪಟ್ಟಣಕ್ಕಾಗಿಯೂ ಎಲ್ಲಾ ಮನೆಗಳಿಗಾಗಿಯೂ ಅಳಿರಿ.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”


ಹಿಂದಿನ ಕಾಲದಲ್ಲಿ ನೀವು ತೂರ್ ನಗರದಲ್ಲಿ ಉಲ್ಲಾಸಿಸಿದಿರಿ. ಪ್ರಾರಂಭದಿಂದಲೇ ಆ ನಗರವು ಅಭಿವೃದ್ಧಿಹೊಂದುತ್ತಿತ್ತು. ಆ ನಗರದ ಜನರು ಬಹುದೂರ ಪ್ರಯಾಣಮಾಡಿ ನೆಲೆಸಿರುವರು.


ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಬ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನ್ನಲು ಆಹಾರವೇ ಇರಲಿಲ್ಲ.


“ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’


ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.


ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಈ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಈ ಪಟ್ಟಣಕ್ಕೆ ತರುವದಿಲ್ಲ. ಈ ಪಟ್ಟಣದ ಗೋಡೆಗಳ ಮೇಲೆ ಆಕ್ರಮಣಮಾಡಲು ಅವನು ದಿಬ್ಬ ಹಾಕುವದಿಲ್ಲ.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ.


ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿಹೋಗಿರುವೆ.


ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು