Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 22:6 - ಪರಿಶುದ್ದ ಬೈಬಲ್‌

6 ಏಲಾಮಿನ ಅಶ್ವಸೈನಿಕರು ತಮ್ಮ ಬತ್ತಳಿಕೆಯನ್ನು ತೆಗೆದುಕೊಂಡು ರಣರಂಗಕ್ಕೆ ಹೊರಡುವರು. ಕೀರ್ ಸ್ಥಳದ ಜನರು ತಮ್ಮ ಗುರಾಣಿಗಳಿಂದ ಶಬ್ದಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಲಾಮು ಕುದರೆಗಳ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆಗೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಲಾಮು ರಥಾಶ್ವಪದಾತಿಗಳಿಂದ ಬತ್ತಳಿಕೆಯನ್ನು ಧರಿಸಿತು; ಕೀರಿನವರು ಗುರಾಣಿಯ ಗೌಸಣಿಗೆಯನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 22:6
9 ತಿಳಿವುಗಳ ಹೋಲಿಕೆ  

ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.


ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲೇ, ನೀನು ನನಗೆ ಇಥಿಯೋಪ್ಯದವರಂತಿರುವೆ. ಇಸ್ರೇಲನ್ನು ಈಜಿಪ್ಟ್ ದೇಶದಿಂದ ನಾನು ಹೊರತಂದೆನು. ಕಪ್ತೋರಿನಿಂದ ಫಿಲಿಷ್ಟಿಯರನ್ನು ಹೊರತಂದೆನು ಮತ್ತು ಕೀರ್‌ನಿಂದ ಅರಾಮ್ಯರನ್ನು ತಂದೆನು.”


“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


ಸೈನ್ಯಗಳು ನಿಮ್ಮ ವಿಶೇಷವಾದ ಕಣಿವೆಯಲ್ಲಿ ಎದುರುಬದುರಾಗಿ ಭೇಟಿಯಾಗುವರು. ಕಣಿವೆಯು ರಥಗಳಿಂದ ತುಂಬಿಹೋಗುವದು. ಅಶ್ವದಳದವರನ್ನು ದ್ವಾರದ ಮುಂದೆ ನಿಲ್ಲಿಸಲಾಗುವದು.


ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು