Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:12 - ಪರಿಶುದ್ದ ಬೈಬಲ್‌

12 ಯೆಹೋವನು ಹೇಳುವುದೇನೆಂದರೆ, “ಚೀದೋನ್ ಕುಮಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ. ತೂರಿನ ಜನರು, ‘ನಮಗೆ ಸೈಪ್ರಸ್‌ನವರು ಸಹಾಯ ಮಾಡುತ್ತಾರೆ’ ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್‌ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀವಿುಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿಯಿರದು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:12
21 ತಿಳಿವುಗಳ ಹೋಲಿಕೆ  

ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು. ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದ್ವೀಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.


“ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


“ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.


“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.


“ಆದ್ದರಿಂದ ಬಾಬಿಲೋನೇ, ಅಲ್ಲಿ ಸುಮ್ಮನೆ ಕುಳಿತಿರು. ಕಸ್ದೀಯರ ಕುಮಾರಿಯೇ ಕತ್ತಲೆಯೊಳಗೆ ಹೋಗಿ ಇರು, ಯಾಕೆಂದರೆ ನೀನು ‘ಜನಾಂಗಗಳ ರಾಣಿ’ ಎಂದು ಇನ್ನು ಮುಂದೆ ಕರೆಯಲ್ಪಡುವದಿಲ್ಲ.


“ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.


ಹಿಂದಿನ ಕಾಲದಲ್ಲಿ ನೀವು ತೂರ್ ನಗರದಲ್ಲಿ ಉಲ್ಲಾಸಿಸಿದಿರಿ. ಪ್ರಾರಂಭದಿಂದಲೇ ಆ ನಗರವು ಅಭಿವೃದ್ಧಿಹೊಂದುತ್ತಿತ್ತು. ಆ ನಗರದ ಜನರು ಬಹುದೂರ ಪ್ರಯಾಣಮಾಡಿ ನೆಲೆಸಿರುವರು.


ಇಸ್ರೇಲರು ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರ ಸೈನ್ಯವು ಶತ್ರುಗಳನ್ನು ಸೋಲಿಸಿ ಅವರನ್ನು ದೊಡ್ಡ ಚೀದೋನ್ ಮತ್ತು ಮಿಸ್ರೆಪೋತ್ಮಯಿಮ್‌ವರೆಗೂ ಪೂರ್ವದಿಕ್ಕಿನಲ್ಲಿ ಮಿಚ್ಛೆಯ ಕಣಿವೆಯವರೆಗೂ ಬೆನ್ನಟ್ಟಿತು. ಶತ್ರುಗಳಲ್ಲಿ ಯಾರೂ ಉಳಿದುಕೊಳ್ಳದಂತೆ ಇಸ್ರೇಲರು ಯುದ್ಧಮಾಡಿದರು.


ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”


“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”


ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. ಸೂಕ್ಷ್ಮವಾಗಿ ಪರಿಶೀಲಿಸಲು ಯಾರನ್ನಾದರೂ ಕೇದಾರಿಗೆ ಕಳುಹಿಸಿರಿ. ಯಾರಾದರೂ ಎಂದಾದರೂ ಇಂಥ ಕೆಲಸ ಮಾಡಿರುವರೇ, ನೋಡಿರಿ.


ಕಿತ್ತೀಮಿನ ಹಡಗುಗಳು ಬಂದು ಉತ್ತರದ ರಾಜನೊಂದಿಗೆ ಯುದ್ಧ ಮಾಡುವವು. ಆ ಹಡಗುಗಳು ಬರುವದನ್ನು ಅವನು ನೋಡಿ ಹೆದರಿಕೊಳ್ಳುವನು. ಅವನು ಪರಿಶುದ್ಧ ನಿಬಂಧನೆಯ ಮೇಲೆ ಕೋಪಿಸಿಕೊಂಡು ಹಿಂತಿರುಗುವನು. ಅವನು ಹಿಂತಿರುಗಿದ ಮೇಲೆ ಪರಿಶುದ್ಧ ನಿಬಂಧನೆಯನ್ನು ತೊರೆದವರಿಗೆ ಸಹಾಯ ಮಾಡುವನು.


ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು