Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:13 - ಪರಿಶುದ್ದ ಬೈಬಲ್‌

13 ಆಗ ತೂರಿನ ಜನರು ಹೀಗೆನ್ನುವರು: “ಬಾಬಿಲೋನಿನವರು ನಮಗೆ ಸಹಾಯಮಾಡುವರು.” ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು; ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು; ಬುರುಜುಗಳನ್ನು ಕಟ್ಟಿಕೊಂಡು ಇದರ ಕೋಟೆಗಳನ್ನು ಕೆಡವಿ ಇದನ್ನು ನಾಶಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:13
23 ತಿಳಿವುಗಳ ಹೋಲಿಕೆ  

“ಆದ್ದರಿಂದ ಅಬ್ರಹಾಮನು ಖಾಲ್ದೆಯ ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.


ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.


“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”


ಬಾಬಿಲೋನು ಸೊದೋಮ್ ಗೊಮೋರಗಳಂತೆ ನಾಶವಾಗುವದು. ದೇವರೇ ಇದನ್ನು ಮಾಡುವನು. ಆಗ ಅಲ್ಲಿ ಏನೂ ಉಳಿಯದು. “ಎಲ್ಲಾ ರಾಜ್ಯಗಳಿಗಿಂತ ಬಾಬಿಲೋನ್ ಬಹಳ ಸುಂದರವಾಗಿದೆ. ಬಾಬಿಲೋನಿಯರು ತಮ್ಮ ನಗರದ ಬಗ್ಗೆ ತುಂಬಾ ಹೆಚ್ಚಳಪಡುತ್ತಾರೆ.


“ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗಳನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.


ದೇವರು ಹೀಗೆ ಹೇಳುವನು: “ನಾನು ಕೋಪಗೊಂಡಾಗ ಬೆತ್ತವನ್ನು ಹೇಗೆ ಉಪಯೋಗಿಸುವೆನೋ ಹಾಗೆಯೇ ಇಸ್ರೇಲನ್ನು ಶಿಕ್ಷಿಸಲು ಅಶ್ಶೂರವನ್ನು ಉಪಯೋಗಿಸುವೆನು.


ಅರಣ್ಯದಲ್ಲಿ ವಾಸಿಸುತ್ತಿರುವ ಜನರು ಅವನಿಗೆ ಅಡ್ಡಬೀಳಲಿ. ಅವನ ವೈರಿಗಳೆಲ್ಲ ಅವನ ಮುಂದೆ ಬಿದ್ದು ಮಣ್ಣುಮುಕ್ಕಲಿ.


ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ನಮ್ಮ ಮೇಲೆ ಆಕ್ರಮಣಮಾಡಿ, ಒಂಟೆಗಳನ್ನು ಹೊಡೆದುಕೊಂಡು ಹೋದರು! ಅಲ್ಲದೆ ನಿನ್ನ ಸೇವಕರುಗಳನ್ನು ಕೊಂದುಹಾಕಿದರು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು. ಇದನ್ನು ನಿನಗೆ ತಿಳಿಸುವುದಕ್ಕಾಗಿಯೇ ಬಂದೆನು” ಎಂದು ಹೇಳಿದನು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.


ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.


ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.


ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು.


ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.


ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್.


ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು.


ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”


ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಆ ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)


ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು ಮತ್ತು ಅಶ್ವರೂಢರು ಆಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು