Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 23:15 - ಪರಿಶುದ್ದ ಬೈಬಲ್‌

15 ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಕಾಲದಲ್ಲಿ ತೂರ್‍ಪಟ್ಟಣವು ಒಬ್ಬ ರಾಜನ ಆಡಳಿತದ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷದ ಮೇಲೆ ಸೂಳೆಯ ವಿಷಯವಾದ ಗೀತದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 23:15
13 ತಿಳಿವುಗಳ ಹೋಲಿಕೆ  

ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.


ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ.


ಅಲ್ಲಿ ಆಕೆಗೆ ನಾನು ದ್ರಾಕ್ಷಿತೋಟಗಳನ್ನು ಕೊಡುವೆನು. ಆಕೆಗೆ ಆಕೋರ್ ತಗ್ಗುಪ್ರದೇಶವನ್ನು ನಿರೀಕ್ಷೆಯ ಬಾಗಿಲಾಗಿ ಕೊಡುವೆನು. ಆಗ ಅವಳು ತಾನು ಈಜಿಪ್ಟಿನಿಂದ ಹೊರಬಂದ ತನ್ನ ಯೌವನದ ದಿನಗಳಲ್ಲಿ ಹೇಗೆ ನನ್ನ ಸಂಗಡ ಮಾತನಾಡಿದಳೋ ಹಾಗೆಯೇ ನನ್ನೊಂದಿಗೆ ಮಾತನಾಡುವಳು.”


ಆ ಹೋತವು ಗ್ರೀಕ್ ರಾಜ್ಯ. ಅದರ ಎರಡು ಕಣ್ಣುಗಳ ಮಧ್ಯದ ಕೊಂಬು ಮೊದಲನೆಯ ಅರಸ.


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನ್ನು ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.


ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನ್ನು ಕೊಂಡೊಯ್ದವು. “‘ತೂರೇ, ನೀನು ಆ ಸರಕು ಸಾಗಾಣಿಕೆಯ ಹಡಗುಗಳಂತಿರುವೆ. ಸಮುದ್ರಮಧ್ಯದಲ್ಲಿ ಅನೇಕ ಐಶ್ವರ್ಯಗಳಿಂದ ತುಂಬಿದವಳಾಗಿದ್ದೀ.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


“ಪುರುಷರು ಮರೆತಿರುವ ವೇಶ್ಯೆಯೇ, ನಿನ್ನ ಕಿನ್ನರಿಯನ್ನು ತೆಗೆದುಕೊಂಡು ಊರೊಳಗೆ ಹೋಗಿ ನಿನ್ನ ಹಾಡನ್ನು ನುಡಿಸು, ಮತ್ತೆಮತ್ತೆ ಹಾಡು. ಆಗ ಯಾರಾದರೂ ನಿನ್ನನ್ನು ನೆನಪುಮಾಡಿಕೊಳ್ಳಬಹುದೇನೋ.”


ಎಪ್ಪತ್ತು ವರ್ಷಗಳ ನಂತರ ಯೆಹೋವನು ತೂರಿನ ಕುರಿತು ಮತ್ತೆ ಆಲೋಚಿಸಿ ತೀರ್ಮಾನಿಸುವನು. ತೂರಿನಲ್ಲಿ ವ್ಯಾಪಾರವು ಮತ್ತೆ ಪ್ರಾರಂಭವಾಗುವದು. ಅದು ಲೋಕದ ಎಲ್ಲಾ ರಾಜ್ಯಗಳಿಗೆ ವೇಶ್ಯೆಯಂತಿದೆ.


ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು