Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:17 - ಪರಿಶುದ್ದ ಬೈಬಲ್‌

17 ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ. ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲೈ ಭೂನಿವಾಸಿಗಳೇ, ಕೇಳಿರೆಲ್ಲರು, ಕಾದಿದೆ ನಿಮಗೆ ಭಯಭೀತಿ, ಕುಳಿ ಮತ್ತು ಬಲೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಭೂನಿವಾಸಿಯೇ, ಭಯವೂ ಗುಂಡಿಯೂ ಬಲೆಯೂ ನಿನಗೆ ಕಾದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಭೂಮಿಯ ನಿವಾಸಿಗಳೇ, ಭಯವೂ, ಕುಳಿಯೂ, ಬಲೆಯೂ ನಿಮಗೆ ಕಾದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:17
13 ತಿಳಿವುಗಳ ಹೋಲಿಕೆ  

ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.


ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.


ಅವನ ಸ್ವಂತ ಕಾಲುಗಳೇ ಅವನನ್ನು ಬಲೆಗೆ ನಡೆಸುತ್ತದೆ. ಅವನು ಬಲೆಯೊಳಗೆ ನಡೆದುಹೋಗಿ ಸಿಕ್ಕಿಕೊಳ್ಳುವನು.


ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು. ಆದರೆ ನೀನು ಆತನನ್ನು ಸನ್ಮಾನಿಸದೆ ಹೋದರೆ ಆತನು ನಿನಗೆ ಮುಗ್ಗರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು.


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!”


ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನ್ನ ಮೇಲೆ ಖಡ್ಗವನ್ನು ತರುವೆನು. ನಮ್ಮ ಒಡೆಯನಾದ ಯೆಹೋವನು ಈ ಮಾತುಗಳನ್ನು ನುಡಿದಿರುವದರಿಂದ ಇದು ನಡೆಯುವುದು.’”


ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು