Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:2 - ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಜೆ ಯಾಜಕ, ದಾಸ ದಣಿ, ತೊತ್ತು ಯಜಮಾನಿ, ಕೊಳ್ಳುವವನು ಮಾರುವವನು, ಸಾಲಕೊಡುವವನು ತರುವವನು, ಬಡ್ಡಿ ತೆಗೆಯುವವನು ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:2
26 ತಿಳಿವುಗಳ ಹೋಲಿಕೆ  

ಯಾಜಕರು ಸಾಮಾನ್ಯ ಜನರಿಂದ ಬೇರೆ ಆಗಿರಲಿಲ್ಲ. ಅವರು ಮಾಡಿದ ಪಾಪಗಳಿಗಾಗಿ ಅವರನ್ನು ನಾನು ಶಿಕ್ಷಿಸುವೆನು. ಕೆಟ್ಟ ಕೆಲಸವನ್ನು ಮಾಡಿದ್ದಕ್ಕೆ ಅವರಿಗೆ ಪ್ರತಿಫಲ ಕೊಡುವೆನು.


ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ ಇದು ಸಂಭವಿಸಿತು. ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ ಇದು ಸಂಭವಿಸಿತು. ಆ ಜನರು ಜೆರುಸಲೇಮ್ ಪಟ್ಟಣದಲ್ಲಿ ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು.


“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’


ಅವರು ಒಟ್ಟಿಗೆ ಊಟ ಮಾಡುತ್ತಿದ್ದಾಗ, ಇಷ್ಮಾಯೇಲ್ ಮತ್ತು ಅವನ ಹತ್ತು ಜನರು ಎದ್ದು ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಕೊಂದರು. ಗೆದಲ್ಯನನ್ನು ಬಾಬಿಲೋನಿನ ರಾಜನು ಯೆಹೂದದ ಅಧಿಪತಿಯಾಗಿ ನೇಮಿಸಿದ್ದನು.


ಆ ಜನರು ತಗ್ಗಿಸಲ್ಪಡುವರು. ಆ ಗಣ್ಯವ್ಯಕ್ತಿಗಳು ತಮ್ಮ ತಲೆಗಳನ್ನು ಕೆಳಗೆ ಮಾಡಿ ನೆಲದ ಕಡೆಗೆ ನೋಡುವರು.


ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.


ಜೀವದಿಂದುಳಿದ ಜನರನ್ನು ಸೆರೆಹಿಡಿದು ಬಾಬಿಲೋನಿನಗೆ ತೆಗೆದುಕೊಂಡು ಹೋಗಿ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಪಾರಸಿಯ ಸಾಮ್ರಾಜ್ಯ ಸ್ಥಾಪನೆಯಾಗುವ ತನಕ ಅವರು ಅಲ್ಲಿ ಗುಲಾಮರಾಗಿದ್ದರು.


ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.


ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರವೇರುವದು.


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


ನನ್ನ ಜನರ ಪಾಪವು ಬಹಳವಾಗಿತ್ತು. ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ.


ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. ಆತನು ಯಾಜಕರನ್ನು ಗೌರವಿಸಲಿಲ್ಲ. ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು