Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:21 - ಪರಿಶುದ್ದ ಬೈಬಲ್‌

21 ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯವಿಚಾರಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ ಭೂಮಂಡಲದ ನೆಲದೊಡೆಯರನ್ನೂ ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ ಆಕಾಶದವರ ಸೈನ್ಯವನ್ನೂ, ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:21
23 ತಿಳಿವುಗಳ ಹೋಲಿಕೆ  

ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.


ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.


ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.


ದೇಶವು ನಿರ್ಜನವಾಗಿ ಶೋಕಿಸುವದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವದು. ಈ ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.


ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.


“ಯೆಹೋವನ ಯಜ್ಞದ ದಿನದಲ್ಲಿ ನಾನು ರಾಜಕುಮಾರರನ್ನೂ ಇತರ ನಾಯಕರುಗಳನ್ನೂ ಶಿಕ್ಷಿಸುವೆನು. ಪರದೇಶದ ಬಟ್ಟೆಯನ್ನು ತೊಟ್ಟುಕೊಳ್ಳುವ ಪ್ರತಿಯೊಬ್ಬರನ್ನೂ ನಾನು ಶಿಕ್ಷಿಸುವೆನು.


“ನರಪುತ್ರನೇ, ನನ್ನ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಬಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.


ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವೆ. ಇದನ್ನು ನಾನು ನುಡಿದಿದ್ದೇನೆ.’” ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು