Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 24:8 - ಪರಿಶುದ್ದ ಬೈಬಲ್‌

8 ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 24:8
16 ತಿಳಿವುಗಳ ಹೋಲಿಕೆ  

ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.


ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.


ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು.


ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”


ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’


ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


ಶೋಕಗೀತೆಗಳನ್ನು ನುಡಿಸಲು ನನ್ನ ಹಾರ್ಪ್ ವಾದ್ಯವನ್ನು ಶೃತಿ ಮಾಡಲಾಗಿದೆ. ನನ್ನ ಕೊಳಲು ಅಳುವವರಿಗೆ ತಕ್ಕಂತೆ ನುಡಿಯುತ್ತದೆ.


ಸಮೀಪದಲ್ಲಿದ್ದ ನೀರವಂಜಿ ಮರಗಳಿಗೆ ನಾವು ನಮ್ಮ ಹಾರ್ಪ್‌ವಾದ್ಯಗಳನ್ನು ತೂಗುಹಾಕಿದೆವು.


ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿಬಿಡುವುದು.”


ಕರ್ಮೆಲ್ ಬೆಟ್ಟದಲ್ಲಿ ಗಾಯನವಾಗಲಿ ಹರ್ಷಧ್ವನಿಯಾಗಲಿ ಇರದು. ಸುಗ್ಗಿಕಾಲದ ಎಲ್ಲಾ ಸಂತಸಗಳನ್ನು ನಾನು ನಿಲ್ಲಿಸುವೆನು. ದ್ರಾಕ್ಷಿಯ ಹಣ್ಣುಗಳು ರಸ ತೆಗೆಯಲು ಪಕ್ವವಾಗಿವೆ. ಆದರೆ ಅವುಗಳೆಲ್ಲ ವ್ಯರ್ಥವಾಗುತ್ತವೆ.


ಪಟ್ಟಣದ ದ್ವಾರಗಳ ಬಳಿಯಿಂದ ಹಿರಿಯರು ಹೊರಟುಹೋಗಿದ್ದಾರೆ. ಯುವಕರು ಸಂಗೀತ ನುಡಿಸುವುದನ್ನು ನಿಲ್ಲಿಸಿದ್ದಾರೆ.


ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.


ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಯಾವ ಉತ್ಸಾಹಧ್ವನಿಯೂ ಕೇಳದಿರಲಿ.


ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು