Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:11 - ಪರಿಶುದ್ದ ಬೈಬಲ್‌

11 ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:11
42 ತಿಳಿವುಗಳ ಹೋಲಿಕೆ  

ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.


ನೀನು ನಿನ್ನ ವೈರಿಗಳ ಮೇಲೆ ಕೈ ಎತ್ತಿ ಅವರನ್ನು ನಾಶಮಾಡುವೆ.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಆದರೆ ಸಾತ್ವಿಕತೆಯಿಂದ ಗೌರವಕರವಾದ ರೀತಿಯಲ್ಲಿ ಅವರಿಗೆ ಉತ್ತರವನ್ನು ಹೇಳಿ. ನೀವು ಮಾಡುತ್ತಿರುವುದು ಯೋಗ್ಯವಾದದ್ದೆಂಬುದು ನಿಮಗೆ ಯಾವಾಗಲೂ ಖಚಿತವಾಗಿ ತಿಳಿದಿರಬೇಕು. ಆಗ, ನೀವು ಕ್ರಿಸ್ತನಲ್ಲಿ ಒಳ್ಳೆಯವರಾಗಿ ಜೀವಿಸುವುದನ್ನು ನೋಡಿ ನಿಮ್ಮ ಬಗ್ಗೆ ಕೆಟ್ಟಮಾತುಗಳನ್ನು ಹೇಳುವವರು ತಾವು ಹೇಳಿದ ಕೆಟ್ಟ ಸಂಗತಿಗಳಿಗಾಗಿ ನಾಚಿಕೆಪಡುವರು.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಹೌದು, ಈ ಜನರ ಹೃದಯಗಳು ಕಠಿಣವಾಗಿವೆ. ಈ ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.’


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.


ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.


ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.


ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.


ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ.


ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.


ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!


ಯಾಕೆಂದರೆ ದುಷ್ಟರು ದೇವರಿಗೆ ವಿಧೇಯರಾಗಲಿಲ್ಲ; ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.


ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,


ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.


ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟುಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


ಯಾಕೆಂದರೆ ಸ್ವಲ್ಪಮಂದಿ ಮಾತ್ರವೇ ಜೀವಂತವಾಗಿ ಉಳಿಯುವರು. ಅವರು ಜೆರುಸಲೇಮಿನಿಂದ ಹೊರಟುಹೋಗುವರು. ಉಳಿದವರು ಚೀಯೋನ್ ಪರ್ವತದಿಂದ ಬರುವರು.” ಯೆಹೋವನ ಗಾಢವಾದ ಪ್ರೀತಿಯೇ ಇದನ್ನು ಮಾಡುವದು.


ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.


ಯೆಹೋವನು ಯುದ್ಧ ಸನ್ನದ್ಧನಾದನು. ಆತನು ಒಳ್ಳೆಯತನವೆಂಬ ಕವಚ, ರಕ್ಷಣೆಯೆಂಬ ಶಿರಸ್ತ್ರಾಣ, ಶಿಕ್ಷೆಯೆಂಬ ಬಟ್ಟೆ ಮತ್ತು ಗಾಢವಾದ ಪ್ರೇಮವೆಂಬ ಮೇಲ್ಹೊದಿಕೆಯನ್ನು ಧರಿಸಿದ್ದಾನೆ.


ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.


ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು.


ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು