Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:18 - ಪರಿಶುದ್ದ ಬೈಬಲ್‌

18 ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ. ನಾವು ಹೆರುವದು ಕೇವಲ ಗಾಳಿಯನ್ನೇ. ನಾವು ಈ ಲೋಕದೊಳಗೆ ಹೊಸಜೀವಿಗಳನ್ನು ನಿರ್ಮಿಸುವದಿಲ್ಲ. ನಾವು ದೇಶಕ್ಕೆ ರಕ್ಷಣೆಯನ್ನು ತರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರಸವವೇದನೆಪಟ್ಟು ನಾವು ಹಡೆದದ್ದು ಗಾಳಿಯನ್ನೆ ಆಗಲಿಲ್ಲ ಜಗಕೆ ನಮ್ಮಿಂದ ಯಾವ ರಕ್ಷಣೆ ನೀಡಲಿಲ್ಲ ನಾವು ಜನ್ಮ ಲೋಕನಿವಾಸಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು. ಭೂಮಿಗೆ ನಮ್ಮಿಂದ ಯಾವ ಬಿಡುಗಡೆಯೂ ಆಗಲಿಲ್ಲ. ಭೂಲೋಕದ ಜನರಿಗೆ ಜನ್ಮ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:18
12 ತಿಳಿವುಗಳ ಹೋಲಿಕೆ  

ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.


ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.


ಜನರೇ, ನೀವು ಪ್ರಯೋಜನವಿಲ್ಲದ ಕಾರ್ಯಗಳನ್ನು ಮಾಡಿದಿರಿ. ಆ ಕೆಲಸಗಳು ಒಣಹುಲ್ಲಿನಂತೆಯೂ ದಂಟಿನಂತೆಯೂ ಇವೆ. ನಿಮ್ಮ ಆತ್ಮವು ನಿಮ್ಮಲ್ಲಿ ಬೆಂಕಿಯಂತಿದ್ದು ನಿಮ್ಮನ್ನು ಸುಡುವದು.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು