Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:21 - ಪರಿಶುದ್ದ ಬೈಬಲ್‌

21 ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:21
28 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.


ದೇವರು ಹೇಳುವುದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.


“ಭೂಮಿಯೇ, ನನಗಾಗಿರುವ ಕೆಡುಕುಗಳನ್ನು ಮರೆಮಾಡಬೇಡ. ನ್ಯಾಯಕ್ಕಾಗಿ ನಾನಿಡುವ ಮೊರೆ ನಿಂತುಹೋಗಲು ಅವಕಾಶ ಕೊಡಬೇಡ.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


“ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಈ ಕಾಲದ ಜನರಾದ ನೀವು ದಂಡನೆ ಹೊಂದುವಿರಿ.


ನೀವು ಬುದ್ಧಿಹೀನರು! ಹೊರಭಾಗವನ್ನು ಮಾಡಿದಾತನೇ (ದೇವರು) ಒಳಭಾಗವನ್ನೂ ಮಾಡಿದ್ದಾನೆ.


ಆಗ ದೇವರು ನನಗೆ, “ನರಪುತ್ರನೇ, ನನ್ನನ್ನು ನನ್ನ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕೃತ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯಗಳನ್ನು ನೀನು ನೋಡುವೆ” ಎಂದು ಹೇಳಿದನು.


ಅವಳು ಪ್ರವಾದಿಗಳ, ದೇವರ ಪರಿಶುದ್ಧಜನರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವನ್ನು ಸುರಿಸಿ ಅಪರಾಧಿಯಾದಳು.”


ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ. ಭೂಮಿಯು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತದೆ.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಸರ್ವಶಕ್ತನಾದ ಯೆಹೋವನು ನನಗೆ ತಿಳಿಸಿದ ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ನೀವು ಕೆಟ್ಟಕಾರ್ಯಗಳನ್ನು ನಡೆಸಿ ಅಪರಾಧಿಗಳಾಗಿರುವಿರಿ. ನಿಮ್ಮ ದುಷ್ಟತ್ವವು ಕ್ಷಮಿಸಲ್ಪಡುವ ಮುಂಚೆ ನೀವು ಸಾಯುವಿರಿ ಎಂದು ಖಂಡಿತವಾಗಿ ಹೇಳುತ್ತೇನೆ” ಇದು ನನ್ನ ಒಡೆಯನಾದ ಸರ್ವಶಕ್ತನ ನುಡಿಗಳು.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.


“ಇಗೋ! ನೀವು ಪಾವತಿ ಮಾಡಬೇಕಾದ ರಸೀದಿ ಇಲ್ಲಿದೆ. ನೀವು ಅಪರಾಧಿಗಳೆಂದು ಈ ರಸೀದಿ ತೋರಿಸುತ್ತದೆ. ಈ ಚೀಟಿಯಲ್ಲಿ ಬರೆದ ಮೊತ್ತವನ್ನು ಕೊಡದೆ ಸುಮ್ಮನಿರಲಾರೆ. ನಿಮ್ಮನ್ನು ಶಿಕ್ಷಿಸುವದರ ಮೂಲಕ ಈ ಮೊತ್ತವನ್ನು ಕೊಟ್ಟು ಬಿಡುವೆನು.


ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”


ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಆ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು