Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:3 - ಪರಿಶುದ್ದ ಬೈಬಲ್‌

3 ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:3
34 ತಿಳಿವುಗಳ ಹೋಲಿಕೆ  

ದೇವಶಾಂತಿಯು ಕ್ರಿಸ್ತ ಯೇಸುವಿನಲ್ಲಿ ನಿಮ್ಮ ಹೃದಯಗಳನ್ನೂ ಮನಸ್ಸುಗಳನ್ನೂ ಕಾಯುವುದು. ದೇವರು ಕೊಡುವ ಆ ಶಾಂತಿಯು ನಾವು ಅರ್ಥಮಾಡಿಕೊಳ್ಳಲಾಗದಷ್ಟು ಅಗಮ್ಯವಾಗಿದೆ.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.


ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ಆಗ ಶಾಂತಿ ನೆಲೆಸುವದು. ಹೌದು, ಅಶ್ಶೂರದ ಸೈನ್ಯವು ನಮ್ಮ ದೇಶಕ್ಕೆ ಬಂದು ನಮ್ಮ ಮಹಾ ಕಟ್ಟಡಗಳನ್ನು ತುಳಿದುಹಾಕುವರು. ಆದರೆ ಇಸ್ರೇಲನ್ನು ಆಳುವಾತನು ಏಳು ಕುರುಬರನ್ನೂ ಎಂಟು ನಾಯಕರನ್ನೂ ಆರಿಸುವನು.


ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅಪರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು.


ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


“ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.


ಆದರೆ ಯಾವನಾದರೂ ಆಶ್ರಯಕ್ಕಾಗಿ ನನ್ನ ಬಳಿಗೆ ಬಂದು ನನ್ನೊಡನೆ ಸಮಾಧಾನ ಮಾಡಿಕೊಳ್ಳುವುದಾದರೆ ಅವನು ನನ್ನ ಬಳಿಗೆ ಬಂದು ಸಮಾಧಾನದಲ್ಲಿರಲಿ.


ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.


“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ಬೇರೆ ಎಲ್ಲರಿಗಿಂತ ನನ್ನ ಸೇವಕನು ಕುರುಡನಾಗಿದ್ದಾನೆ. ಬೇರೆ ಎಲ್ಲರಿಗಿಂತ ನನ್ನ ದೂತನು ಕಿವುಡನಾಗಿದ್ದಾನೆ. ನಾನು ಒಡಂಬಡಿಕೆ ಮಾಡಿಕೊಂಡ ನನ್ನ ಸೇವಕನು ಪೂರ್ಣ ಕುರುಡನಾಗಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.


ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ’” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು