Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:4
32 ತಿಳಿವುಗಳ ಹೋಲಿಕೆ  

ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


“ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?


ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ. ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.


ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.


“ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!”


ನಾನು ನ್ಯಾಯವಂತನೆಂದು ನಿಮಗೆ ಬೇಗನೆ ತೋರಿಸುವೆನು. ನಿಮ್ಮನ್ನು ಬೇಗನೆ ರಕ್ಷಿಸುವೆನು. ನಾನು ನನ್ನ ಸಾಮರ್ಥ್ಯದಿಂದ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವೆನು. ದೂರದೇಶದವರು ನನಗೋಸ್ಕರ ಕಾಯುತ್ತಿದ್ದಾರೆ. ಅವರು ತಮ್ಮ ರಕ್ಷಣೆಗಾಗಿ ನನ್ನ ಶಕ್ತಿಯನ್ನು ಎದುರುನೋಡುತ್ತಿದ್ದಾರೆ.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು