Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:6 - ಪರಿಶುದ್ದ ಬೈಬಲ್‌

6 ಅದು ಕಾಲುತುಳಿತಕ್ಕೆ ಈಡಾಗಿದೆ. ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಕಾಲತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕಾಲು, ಬಡವರ ಕಾಲುಗಳೂ, ದೀನರ ಪಾದಗಳೂ ಅದನ್ನು ತುಳಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:6
21 ತಿಳಿವುಗಳ ಹೋಲಿಕೆ  

ಶಾಂತಿಯನ್ನು ಕೊಡುವ ದೇವರು ಬೇಗನೆ ಸೈತಾನನನ್ನು ಸೋಲಿಸಿ, ಅವನ ಮೇಲೆ ನಿಮಗೆ ಅಧಿಕಾರವನ್ನು ಕೊಡುವನು. ನಮ್ಮ ಪ್ರಭುವಾದ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.


ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕುತ್ತಿಗೆಗಳ ಮೇಲೆ ಇಟ್ಟರು.


“ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ:


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.


ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಈ ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’


ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’


ಏಕೆಂದರೆ ಯೆಹೋವನ ಬಲವು ಈ ಪರ್ವತದಲ್ಲಿದೆ. ಮೋವಾಬ್ ಸೋಲಿಸಲ್ಪಡುವದು. ಯೆಹೋವನು ವೈರಿಯನ್ನು ಹುಲ್ಲಿನಂತೆ ತುಳಿದುಬಿಡುವನು.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಕುಡಿದು ಮತ್ತರಾದ ಎಫ್ರಾಯೀಮ್ಯರಿಗೆ ಸುಂದರವಾದ ಕಿರೀಟದ ಮೇಲೆ ಹೆಚ್ಚಳ. ಆದರೆ ಆ ನಗರವು ತುಳಿಯಲ್ಪಡುವದು.


ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.


ಯೇಹುವು “ಈಜೆಬೆಲಳನ್ನು ಹೊರಕ್ಕೆ ಎಸೆಯಿರಿ!” ಎಂದು ಅವರಿಗೆ ಹೇಳಿದನು. ಆಗ ಕಂಚುಕಿಗಳು ಈಜೆಬೆಲಳನ್ನು ಕೆಳಕ್ಕೆ ಎಸೆದರು. ಈಜೆಬೆಲಳ ರಕ್ತವು ಗೋಡೆಗಳ ಮೇಲೆ ಮತ್ತು ಕುದುರೆಗಳ ಮೇಲೆ ಚಿಮ್ಮಿತು. ಕುದುರೆಗಳು ಈಜೆಬೆಲಳ ದೇಹದ ಮೇಲೆ ತುಳಿದಾಡಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು