ಯೆಶಾಯ 27:11 - ಪರಿಶುದ್ದ ಬೈಬಲ್11 ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.