Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:8 - ಪರಿಶುದ್ದ ಬೈಬಲ್‌

8 ಯೆಹೋವನು ತನ್ನ ಜನರನ್ನು ದೂರದೇಶಕ್ಕೆ ಕಳುಹಿಸುವದರ ಮೂಲಕ ಅವರನ್ನು ಶಿಕ್ಷಿಸುವನು. ಇಸ್ರೇಲರೊಂದಿಗೆ ಯೆಹೋವನು ಕಟುವಾಗಿ ಮಾತನಾಡುವನು. ಆತನ ಮಾತುಗಳು ಮರುಭೂಮಿಯ ಬಿಸಿಗಾಳಿಯಂತೆ ಸುಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ವಿುತಿಮೀರದೆ ಹೋರಾಡುತ್ತಿದ್ದೀ; ಮೂಡಣ ಗಾಳಿಯು ಬೀಸಿದ ದಿನದಲ್ಲಿ ಅದರ ಕ್ರೂರವಾದ ಬಡಿತದಿಂದ ನಿನ್ನ ಜನವನ್ನು ತೊಲಗಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:8
33 ತಿಳಿವುಗಳ ಹೋಲಿಕೆ  

ಇಸ್ರೇಲ್ ಜನರೇ, ಯೆಹೋವನ ಮಾತಿಗೆ ಕಿವಿಗೊಡಿರಿ! ಈ ದೇಶದಲ್ಲಿ ವಾಸಿಸುವ ಜನರ ವಿರುದ್ಧವಾಗಿ ಯೆಹೋವನು ತನ್ನ ವಾದವನ್ನು ಅವರ ಮುಂದಿಡುತ್ತಾನೆ. “ಈ ದೇಶದಲ್ಲಿರುವ ಜನರು ಯೆಹೋವನನ್ನು ನಿಜವಾಗಿಯೂ ತಿಳಿದಿಲ್ಲ. ಅವರು ಯೆಹೋವನಿಗೆ ಸತ್ಯವಂತರೂ ಅಲ್ಲ. ನಿಷ್ಠಾವಂತರೂ ಅಲ್ಲ.


ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.


ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.


ಆ ಸಮಯದಲ್ಲಿ ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಒಂದು ಸಂದೇಶವನ್ನು ಕೊಡಲಾಗುವುದು. “ಬೋಳುಬೆಟ್ಟಗಳಿಂದ ಒಂದು ಬಿಸಿಗಾಳಿಯು ಬೀಸುವುದು. ಅದು ಮರಳುಗಾಡಿನಿಂದ ಬೀಸುವುದು. ಇದು ರೈತನು ತೂರಿ ಹೊಟ್ಟಿನಿಂದ ಕಾಳನ್ನು ಬೇರ್ಪಡಿಸಲು ಬೇಕಾಗುವ ಸೌಮ್ಯವಾದ ಗಾಳಿಯಂತಲ್ಲ.


ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.


ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ಯೆಹೋವನು ಹೀಗೆ ಹೇಳುತ್ತಾನೆ: “ಇಡೀ ದೇಶವು ಹಾಳಾಗುವುದು. ಆದರೆ ನಾನು ಭೂಮಿಯನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.


ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.


ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


ನಾನು ನಿಮ್ಮನ್ನು ಯಾಕೆ ಶಿಕ್ಷಿಸುತ್ತಲೇ ಇರಬೇಕು? ನಾನು ನಿಮ್ಮನ್ನು ಶಿಕ್ಷಿಸಿದೆನು, ಆದರೆ ನೀವು ಬದಲಾಗಲಿಲ್ಲ. ನೀವು ನನಗೆ ವಿರುದ್ಧವಾಗಿ ಏಳುತ್ತಲೇ ಇದ್ದೀರಿ. ಈಗ ಪ್ರತಿಯೊಂದು ತಲೆಯೂ ಪ್ರತಿಯೊಂದು ಹೃದಯವೂ ರೋಗಕ್ಕೆ ಬಲಿಯಾಗಿದೆ.


ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.


ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.


ದೇವರು ತನ್ನ ಮಹಾಶಕ್ತಿಯನ್ನು ನನಗೆ ವಿರೋಧವಾಗಿ ಬಳಸುವನೇ? ಇಲ್ಲ, ಆತನು ನನಗೆ ಕಿವಿಗೊಡುವನು!


ಆತನು ಯಾವಾಗಲೂ ಟೀಕಿಸುವವನಲ್ಲ. ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ.


ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. ಈಗ ನಾವು ಹೇಗೆ ರಕ್ಷಿಸಲ್ಪಡುವೆವು?


ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.


ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು