Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:12 - ಪರಿಶುದ್ದ ಬೈಬಲ್‌

12 ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ : ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಮೊದಲು - ಇದೇ ನಿಮಗೆ ಆವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪಶಮನವು ಇದೇ ಎಂದು ಹೇಳಿದಾಗ ಇವರು ಕೇಳಲೊಲ್ಲದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:12
14 ತಿಳಿವುಗಳ ಹೋಲಿಕೆ  

ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.


ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ಆ ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ಆ ದೇಶಗಳವರು ಇವರ ದೇಶವನ್ನು ದಾಟಿಹೋಗುವಾಗ ಆ ಸುಂದರವಾದ ದೇಶವು ನಾಶವಾಗುವದು.”


“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.


ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.


ಓದುಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೆ ಓದಲು ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು