Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:16 - ಪರಿಶುದ್ದ ಬೈಬಲ್‌

16 ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:16
25 ತಿಳಿವುಗಳ ಹೋಲಿಕೆ  

ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.


ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”


ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.


ಅಸ್ತಿವಾರವನ್ನು ಆಗಲೇ ಹಾಕಲಾಗಿದೆ. ಆ ಅಸ್ತಿವಾರವು ಯೇಸು ಕ್ರಿಸ್ತನೇ. ಆ ಅಸ್ತಿವಾರವನ್ನಲ್ಲದೆ ಬೇರೊಂದು ಅಸ್ತಿವಾರವನ್ನು ಬೇರೆ ಯಾರೂ ಹಾಕಲಾರರು.


ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”


ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”


ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ


ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.


ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.


“ಮೂಲೇ ಕಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲು ಮತ್ತು ಮುನ್ನುಗ್ಗುವ ಸೈನ್ಯ, ಇವೆಲ್ಲವು ಒಟ್ಟಾಗಿ ಯೆಹೂದಿಂದ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು