Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:28 - ಪರಿಶುದ್ದ ಬೈಬಲ್‌

28 ಸ್ತ್ರೀಯು ರೊಟ್ಟಿಯನ್ನು ತಯಾರಿಸುವಾಗ ಹಿಟ್ಟನ್ನು ಕೈಯಲ್ಲಿ ನಾದಿ ಅದನ್ನು ಚೆನ್ನಾಗಿ ಹದಗೊಳಿಸುವಳು. ಆದರೆ ಆಕೆ ಹಾಗೆಯೇ ಮಾಡುತ್ತಾ ಇರುವದಿಲ್ಲ. ಅದೇ ರೀತಿಯಲ್ಲಿ ಯೆಹೋವನು ಜನರನ್ನು ಶಿಕ್ಷಿಸುವನು. ಆತನು ಬಂಡಿಯ ಚಕ್ರದಿಂದ ಬೆದರಿಸುವನು. ಆದರೆ ಅವರನ್ನು ಸಂಪೂರ್ಣವಾಗಿ ಪುಡಿಪುಡಿ ಮಾಡುವದಿಲ್ಲ. ಅವರನ್ನು ತುಳಿದುಬಿಡಲು ಅನೇಕ ಕುದುರೆಗಳನ್ನು ಉಪಯೋಗಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಗೋದಿಯ ಕಾಳನ್ನು ನುಚ್ಚು ನುಚ್ಚು ಮಾಡುವನೋ? ತನ್ನ ಕುದುರೆಗಳನ್ನು ಹೊಡೆಯುತ್ತಾ ಗುಂಡನ್ನು ಗಿರ್ರನೆ ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವದಿಲ್ಲ; ನುಚ್ಚು ನುಚ್ಚು ಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:28
12 ತಿಳಿವುಗಳ ಹೋಲಿಕೆ  

ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಇಸ್ರೇಲನ್ನು ನಾಶನ ಮಾಡುವದಕ್ಕಾಗಿ ಆಜ್ಞಾಪಿಸುವೆನು. ಇಸ್ರೇಲರನ್ನು ನಾನು ಪರದೇಶಗಳಲ್ಲಿ, ಚದರಿಸಿಬಿಡುವೆನು. ಒಬ್ಬನು ಜಾಳಿಗೆಯಲ್ಲಿ ಹಿಟ್ಟನ್ನು ಜಾಳಿಸುವಂತೆ ಇರುವುದು. ಒಳ್ಳೆಯ ಹಿಟ್ಟು ಜಾಳಿಗೆಯ ರಂಧ್ರದ ಮೂಲಕ ಕೆಳಗೆ ಬಿದ್ದರೆ, ಹಿಟ್ಟಿನ ಗಂಟುಗಳು ಜಾಳಿಗೆಯ ಮೇಲೆ ಸಿಕ್ಕಿಕೊಳ್ಳುವವು. ಯಾಕೋಬನ ಕುಟುಂಬಕ್ಕೆ ಇದೇ ರೀತಿಯಾಗುವುದು.


ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.


ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.


ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ? ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.


ಈ ಪಾಠವು ಸರ್ವಶಕ್ತನಾದ ಯೆಹೋವನಿಂದ ಬರುತ್ತದೆ. ಆತನು ಆಶ್ಚರ್ಯಕರವಾದ ಸಲಹೆಯನ್ನು ಕೊಡುತ್ತಾನೆ. ಆತನು ನಿಜವಾಗಿಯೂ ಜ್ಞಾನಿ.


ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು