Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:4 - ಪರಿಶುದ್ದ ಬೈಬಲ್‌

4 ಆ ನಗರವು ಬೆಟ್ಟದ ಮೇಲೆ ಕುಳಿತಿದೆ; ಸುತ್ತಲೂ ಫಲವತ್ತಾದ ಕಣಿವೆ ಇದೆ. ಆ ಸುಂದರವಾದ ಪುಷ್ಪ ಕಿರೀಟವು ಕೇವಲ ಒಣಗಿದ ತರಗೆಲೆ. ಆ ನಗರವು ಬೇಸಿಗೆಯ ಮೊದಲಿನ (ಅಂಜೂರದ) ಹಣ್ಣುಗಳಂತೆ ಇದೆ. ಅದನ್ನು ನೋಡಿದವರು ಕೂಡಲೇ ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕೊಡುವ ಕಾಲಕ್ಕೆ, ಮೊದಲು ಮಾಗಿದ ಅಂಜೂರಕ್ಕೆ ಸಮಾನವಾಗುವುದು; ಆ ಹಣ್ಣನ್ನು ನೋಡಿದವನು, ಅದನ್ನು ಕಿತ್ತ ಕೂಡಲೆ ನುಂಗಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಫಲವತ್ತಾದ ತಗ್ಗಿಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಬಾಡುತ್ತಿರುವ ಹೂವು ಫಲಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವದು; ಆ ಹಣ್ಣನ್ನು ಕಂಡವನು ಕಿತ್ತ ಕೂಡಲೆ ನುಂಗಿಬಿಡುವನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:4
12 ತಿಳಿವುಗಳ ಹೋಲಿಕೆ  

ಆದರೆ ನಿನೆವೆಯೇ, ನಿನ್ನ ಎಲ್ಲಾ ಬಲವಾದ ಬುರುಜುಗಳು ಅಂಜೂರದ ಮರದಂತಿರುವವು. ಹೊಸ ಅಂಜೂರ ಹಣ್ಣುಗಳು ಮಾಗುವವು. ಒಬ್ಬನು ಬಂದು ಮರವನ್ನು ಅಲ್ಲಾಡಿಸಲು ಅಂಜೂರ ಹಣ್ಣುಗಳು ಅಲ್ಲಾಡಿಸುವವನ ಬಾಯಿಗೆ ಬೀಳುವವು. ಅವನು ಅವುಗಳನ್ನು ತಿಂದುಬಿಡುವನು; ಅವು ಇಲ್ಲವಾಗುವವು.


ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.


“ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.


ಸಮಾರ್ಯದ ಕಡೆಗೆ ನೋಡು! ಎಫ್ರಾಯೀಮಿನ ಮತ್ತರಾದ ಜನರು ಆ ಪಟ್ಟಣದ ಬಗ್ಗೆ ಬಹಳ ಅಭಿಮಾನಪಡುತ್ತಿದ್ದಾರೆ. ಆ ನಗರವು ಪರ್ವತದ ಮೇಲಿರುವುದು; ಅದರ ಸುತ್ತಲೂ ಫಲವತ್ತಾದ ಕಣಿವೆ ಇರುವುದು. ಸಮಾರ್ಯದ ಜನರು ತಮ್ಮ ನಗರವು ಸುಂದರವಾದ ಕಿರೀಟವೆಂದು ನೆನಸುತ್ತಾರೆ. ಆದರೆ ಅವರು ಕುಡಿದು ಮತ್ತರಾಗಿದ್ದಾರೆ. ಅವರ “ಸುಂದರ ಕಿರೀಟವು” ಒಣಗಿದ ತರಗೆಲೆಯಾಗಿದೆ.


ಆಕಾಶದಲ್ಲಿದ್ದ ನಕ್ಷತ್ರಗಳು, ಬಿರುಗಾಳಿ ಬೀಸಿದಾಗ ಅಂಜೂರದ ಹಣ್ಣುಗಳು ಮರದಿಂದ ಭೂಮಿಯ ಮೇಲೆ ಉದುರುವಂತೆ ಉದುರಿದವು.


ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.


“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.


ಎಫ್ರಾಯೀಮ್ ಶಿಕ್ಷಿಸಲ್ಪಡುವುದು. ಅದರ ಬೇರು ಒಣಗುತ್ತಲಿದೆ. ಇನ್ನು ಅವರಿಗೆ ಮಕ್ಕಳಾಗದು. ಒಂದುವೇಳೆ ಮಕ್ಕಳಾದಲ್ಲಿ ಅವರ ದೇಹದಿಂದ ಬರುವ ಆ ಅಮೂಲ್ಯ ಶಿಶುವನ್ನು ನಾನು ಸಾಯಿಸುವೆನು.


ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು