Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:5 - ಪರಿಶುದ್ದ ಬೈಬಲ್‌

5 ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನು “ಮಹಿಮಾಪೂರ್ಣವಾದ ಕಿರೀಟ”ವಾಗುವನು. ಉಳಿದಿರುವ ಆತನ ಜನರಿಗೆ ಆತನು “ಅಂದವಾದ ಪುಷ್ಪಕಿರೀಟ”ವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ, ಸುಂದರ ಮುಕುಟವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ದಿನದಲ್ಲಿ ಸೇನಾಧೀಶ್ವರನಾದ ಯೆಹೋವನೇ ತನ್ನ ಜನರಲ್ಲಿ ಉಳಿದವರಿಗೆ ಅಂದದ ಕಿರೀಟವೂ ಸುಂದರ ಮುಕುಟವೂ ಆಗಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:5
21 ತಿಳಿವುಗಳ ಹೋಲಿಕೆ  

ಪ್ರಧಾನ ಕುರುಬನು (ಕ್ರಿಸ್ತನು) ಪ್ರತ್ಯಕ್ಷನಾದಾಗ, ನಿಮಗೆ ಕಿರೀಟವು ಲಭಿಸುವುದು. ಮಹಾ ಪ್ರಭಾವವನ್ನು ಹೊಂದಿರುವ ಆ ಕಿರೀಟವು ತನ್ನ ಸೌಂದರ್ಯವನ್ನು ಕಳೆದುಕೊಳ್ಳುವುದೇ ಇಲ್ಲ.


ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ.


“ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.


ನೀತಿಯೇ ನನ್ನ ಉಡುಪಾಗಿತ್ತು; ಅದೇ ನನ್ನ ನಿಲುವಂಗಿಯಾಗಿತ್ತು. ನ್ಯಾಯವು ನನಗೆ ನಿಲುವಂಗಿಯೂ ಪೇಟವಾಗಿಯೂ ಇತ್ತು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.


ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.


ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು. ಆದರೆ ನಾನು, “ಸಾಕು, ನನಗೆ ಸಾಕು. ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”


ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನ್ನು ಮತ್ತು ಒಂದು ಅಂದವಾದ ಕಿರೀಟವನ್ನು ಧರಿಸಲು ಕೊಟ್ಟೆನು.


ಯೆಹೂದದ ಪ್ರಧಾನರು ತಮ್ಮ ಜನರನ್ನು ಹುರಿದುಂಬಿಸುವರು. ‘ಸೇವಾಧೀಶ್ವರನಾದ ಯೆಹೋವನು ನಿಮ್ಮ ದೇವರು. ಆತನೇ ನಮಗೆ ಬಲವನ್ನು ಕೊಡುವಾತನು’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು