Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:1 - ಪರಿಶುದ್ದ ಬೈಬಲ್‌

1 ದೇವರು ಹೇಳುವುದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರ್ಷವೂ ನಡೆಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಯ್ಯೋ, ಅರೀಯೇಲೇ, ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ಸೈನ್ಯಸಮೇತನಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ! ಈ ವರುಷಕ್ಕೆ ಮುಂದಿನ ವರುಷವನ್ನು ಸೇರಿಸಿರಿ; ಹಬ್ಬಗಳು ಸುತ್ತಿಬರಲಿ; ಆಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಿಚಾಟ ಕಿರಿಚಾಟವಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:1
17 ತಿಳಿವುಗಳ ಹೋಲಿಕೆ  

ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.


ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.


ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.


ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


ಆಶ್ಚರ್ಯಪಡಿರಿ! ಬೆರಗಾಗಿರಿ! ನೀವು ಮತ್ತರಾಗಿರುವಿರಿ! ಆದರೆ ದ್ರಾಕ್ಷಾರಸದಿಂದಲ್ಲ. ನೋಡಿ, ಆಶ್ಚರ್ಯಪಡಿರಿ! ನೀವು ಮುಗ್ಗರಿಸಿಬೀಳುವಿರಿ, ಆದರೆ ಮದ್ಯಪಾನದಿಂದಲ್ಲ.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


“ಇವುಗಳು ಯೆಹೋವನಿಂದ ಆರಿಸಲ್ಪಟ್ಟ ಹಬ್ಬದ ದಿನಗಳು. ಆ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಟಗಳು ನಡೆಸಲ್ಪಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು