Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:19 - ಪರಿಶುದ್ದ ಬೈಬಲ್‌

19 ದೀನರನ್ನು ಯೆಹೋವನು ಸಂತೋಷಿಸುವಂತೆ ಮಾಡುವನು. ಬಡವರು ಇಸ್ರೇಲರ ಪರಿಶುದ್ಧನಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೀನರು ಯೆಹೋವನಲ್ಲಿ ಹೆಚ್ಚುಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲ್ಯರ ಸದಮಲಸ್ವಾವಿುಯಲ್ಲಿ ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:19
37 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ದೀನರು ಧನ್ಯರು. ದೇವರು ವಾಗ್ದಾನ ಮಾಡಿದ ಭೂಮಿಯನ್ನು ಅವರು ಹೊಂದಿಕೊಳ್ಳುವರು.


ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.


ಬಡವನಾಗಿರುವ ವಿಶ್ವಾಸಿಯು ಹೆಮ್ಮೆಪಡಲಿ, ಏಕೆಂದರೆ ದೇವರು ಅವನನ್ನು ಆತ್ಮಿಕ ವಿಷಯದಲ್ಲಿ ಐಶ್ವರ್ಯವಂತನನ್ನಾಗಿ ಮಾಡಿದ್ದಾನೆ.


“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸಮಾಧಾನವನ್ನು ಅನುಭವಿಸುವರು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ನಾನು ಯೆಹೋವನಲ್ಲಿ ಸಂತೋಷಿಸುವೆನು. ನನ್ನ ರಕ್ಷಕನಾದ ದೇವರಲ್ಲಿ ಸಂತೋಷಪಡುವೆನು.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.


ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು!


ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತುಬಿಡುವುದಿಲ್ಲ.


ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.


ಅದು ಕಾಲುತುಳಿತಕ್ಕೆ ಈಡಾಗಿದೆ. ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು.


“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು