Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:6 - ಪರಿಶುದ್ದ ಬೈಬಲ್‌

6 ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:6
23 ತಿಳಿವುಗಳ ಹೋಲಿಕೆ  

ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.


ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.


ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.


ಯೆಹೋವನು ತನ್ನ ಮಹಾಸ್ವರವನ್ನು ಜನರು ಕೇಳುವಂತೆ ಮಾಡುವನು. ತನ್ನ ಸಾಮರ್ಥ್ಯದ ಬಾಹುವು ಕೋಪದಿಂದ ನಡುಗುವದನ್ನು ಜನರು ನೋಡುವಂತೆ ಮಾಡುವನು. ಆ ಬಾಹುವು ಎಲ್ಲವನ್ನು ಸುಡುವ ದೊಡ್ಡ ಅಗ್ನಿಯಂತಿರುವದು. ಯೆಹೋವನ ಶಕ್ತಿಯು ಆಲಿಕಲ್ಲಿನಿಂದಲೂ ಮಳೆಯಿಂದಲೂ ಕೂಡಿರುವ ಬಿರುಗಾಳಿಯಂತಿರುವುದು.


ಇಗೋ, ನನ್ನ ಒಡೆಯನಿಗೆ ಬಲಿಷ್ಠನೂ ಧೈರ್ಯವಂತನೂ ಆಗಿರುವ ಒಬ್ಬನಿದ್ದಾನೆ. ಅವನು ದೇಶದೊಳಗೆ ಆಲಿಕಲ್ಲಿನ ಮಳೆಯಿಂದ ಕೂಡಿದ ಬಿರುಗಾಳಿಯಂತೆಯೂ ನದಿಯ ಬಲವಾದ ಪ್ರವಾಹವು ದೇಶದೊಳಗೆ ನುಗ್ಗಿಬರುವಂತೆಯೂ ಅವನು ಬರುವನು. ಆ ಕಿರೀಟವನ್ನು (ಸಮಾರ್ಯ) ನೆಲದ ಮೇಲೆ ಬಿಸಾಡುವನು.


ಯೆಹೋವನು ಆಕಾಶದಿಂದ ಗುಡುಗಿದನು! ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು.


ನಾನು ಓಡಿಹೋಗಿ ಹಾನಿಕರವಾದ ಈ ಬಿರುಗಾಳಿಯಿಂದ ತಪ್ಪಿಸಿಕೊಳ್ಳುತ್ತಿದ್ದೆನು.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ಯೆಹೋವನು ತಾಳ್ಮೆಯುಳ್ಳ ದೇವರು ಮತ್ತು ಬಲಿಷ್ಠನಾದ ದೇವರಾಗಿದ್ದಾನೆ! ಪಾಪಿಗಳನ್ನು ಆತನು ಶಿಕ್ಷಿಸುವನು. ಆತನಿಂದ ಅವರು ತಪ್ಪಿಸಿಕೊಳ್ಳಲಾರರು. ದುಷ್ಟಜನರನ್ನು ಶಿಕ್ಷಿಸಲು ಯೆಹೋವನು ಬರುವನು. ಆತನು ತನ್ನ ಸಾಮರ್ಥ್ಯವನ್ನು ಬಿರುಗಾಳಿಯಲ್ಲಿಯೂ ಸುಂಟರಗಾಳಿಯಲ್ಲಿಯೂ ತೋರ್ಪಡಿಸುವನು. ಮನುಷ್ಯನು ನೆಲದ ಧೂಳಿನ ಮೇಲೆ ನಡೆಯುತ್ತಾರೆ, ಯೆಹೋವನಾದರೋ ಮೋಡಗಳ ಮೇಲೆ ನಡೆಯುತ್ತಾನೆ.


ಆ ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವೆ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವೆ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.


ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.


ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು