Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:3 - ಪರಿಶುದ್ದ ಬೈಬಲ್‌

3 ದೇವರು ಸೇನಾಪತಿಗಳನ್ನೂ ಸರ್ಕಾರದ ಅಧಿಪತಿಗಳನ್ನೂ ತೆಗೆದುಬಿಡುವನು. ಆತನು ಉತ್ತಮ ಸಲಹೆಗಾರರನ್ನೂ ಮಾಂತ್ರಿಕರನ್ನೂ ಭವಿಷ್ಯ ಹೇಳುವವರನ್ನೂ ತೊಲಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಳಪತಿಗಳು ಮತ್ತು ಗಣ್ಯವ್ಯಕ್ತಿಗಳು, ಮಂತ್ರಿಗಳು ಮತ್ತು ಮಂತ್ರತಂತ್ರದವರು - ಎಲ್ಲರನ್ನು ತೊಲಗಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಘನವಂತ, ಮಂತ್ರಾಲೋಚಕ, ತಾಂತ್ರಿಕ, ಮಾಂತ್ರಿಕ, ಇವರೆಲ್ಲರನ್ನೂ ತೊಲಗಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:3
11 ತಿಳಿವುಗಳ ಹೋಲಿಕೆ  

“ರಾಜನು ನಿಮ್ಮ ಮಕ್ಕಳನ್ನು ಯೋಧರನ್ನಾಗಿ ಮಾಡಿಕೊಳ್ಳುವನು. ಅವರಲ್ಲಿ ಕೆಲವರು ಒಂದು ಸಾವಿರ ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. ಇನ್ನು ಕೆಲವರು ಐವತ್ತು ಮಂದಿ ಸೈನಿಕರಿಗೆ ಅಧಿಕಾರಿಗಳಾಗಬಹುದು. “ತನ್ನ ಭೂಮಿಯನ್ನು ಉಳಲು ಮತ್ತು ಪೈರನ್ನು ಕೊಯ್ಯಲು ರಾಜನು ನಿಮ್ಮ ಮಕ್ಕಳನ್ನು ತೆಗೆದುಕೊಳ್ಳುವನು; ಯುದ್ಧದ ಆಯುಧಗಳನ್ನು ತಯಾರಿಸಲೂ ತನ್ನ ರಥಕ್ಕೆ ಬೇಕಾದ ಸಾಮಾಗ್ರಿಗಳನ್ನು ತಯಾರಿಸಲೂ ಅವನು ಅವರನ್ನು ಬಳಸಿಕೊಳ್ಳುವನು.


ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು.


“ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಮೋಶೆಯು ಯೆಹೋವನಿಗೆ, “ಸ್ವಾಮೀ, ನಾನು ನಿನಗೆ ಸತ್ಯವಾಗಿ ಹೇಳುವುದೇನೆಂದರೆ ನನಗೆ ವಾಕ್ಚಾತುರ್ಯವಿಲ್ಲ. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ಯೋಬನೇ, ಬಲಿಷ್ಠನಾಗಿದ್ದ ನಿನ್ನಲ್ಲಿ ಬೇಸಾಯಕ್ಕೆ ಬಹಳ ಭೂಮಿಯಿದೆ. ಅಲ್ಲದೆ ಜನರು ಸಹ ನಿನ್ನನ್ನು ಗೌರವಿಸುತ್ತಿದ್ದರು.


ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು.


ಯೆಹೋವನು ಹೇಳುವುದೇನೆಂದರೆ: “ನಾನು ಬಾಲಕರನ್ನು ನಿಮ್ಮ ನಾಯಕರನ್ನಾಗಿ ಮಾಡುವೆನು.


ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಯಾಕೆಂದರೆ ಅವರು ನಿಜವಾಗಿಯೂ ನನ್ನನ್ನು ಅರಿತಿಲ್ಲ. ಇಸ್ರೇಲಿನಲ್ಲಿ ವಾಸಿಸುವ ಕೆಲವು ಜನರು ಈಗ ಪ್ರಮುಖರಾಗಿದ್ದಾರೆ. ತಮ್ಮ ಸುಖಜೀವಿತದಲ್ಲಿ ಆನಂದಿಸುತ್ತಾರೆ. ಆದರೆ ಆ ಗಣ್ಯವ್ಯಕ್ತಿಗಳೆಲ್ಲಾ ಬಾಯಾರಿಕೆಯಿಂದಲೂ ಹಸಿವೆಯಿಂದಲೂ ನರಳುವರು.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು