Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:9 - ಪರಿಶುದ್ದ ಬೈಬಲ್‌

9 ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:9
30 ತಿಳಿವುಗಳ ಹೋಲಿಕೆ  

ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಒಹೊಲೀಬಳು ಅವರನ್ನು ಕಂಡಕೂಡಲೇ ಅವರಿಗಾಗಿ ಆಸೆಪಟ್ಟು ಬಾಬಿಲೋನಿನಲ್ಲಿದ್ದ ಅವರ ಬಳಿಗೆ ಸಂದೇಶಕರನ್ನು ಕಳುಹಿಸಿದಳು.


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಯೆಹೋವನು ಹೇಳುವುದೇನೆಂದರೆ: “ಚೀಯೋನಿನ ಸ್ತ್ರೀಯರು ವಯ್ಯಾರದಿಂದ ತಲೆಯಾಡಿಸುತ್ತಾ, ಕುಡಿನೋಟ ಬೀರುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆಯನ್ನು ಝಣಝಣಿಸುತ್ತಾ ನಡೆಯುತ್ತಾರೆ.”


ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ.


ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”


ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.


ಯೇಹುವು ಇಜ್ರೇಲಿಗೆ ಹೋದನು. ಈಜೆಬೆಲಳಿಗೆ ಈ ಸುದ್ದಿಯು ತಿಳಿಯಿತು. ಅವಳು ತಲೆಕೂದಲನ್ನು ಸುಂದರವಾಗಿ ಕಟ್ಟಿಕೊಂಡು, ಅಲಂಕರಿಸಿಕೊಂಡಳು. ನಂತರ ಅವಳು ಹೊರಗೆ ನೋಡುತ್ತಾ ಕಿಟಕಿಯ ಹತ್ತಿರ ನಿಂತುಕೊಂಡಳು.


ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.


“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.


ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.


ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.


ಆದರೆ ಕಾಯಿನನ ಕಾಣಿಕೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಕಾಯಿನನು ದುಃಖಿತನಾದನು ಮತ್ತು ಬಹಳ ಕೋಪಗೊಂಡನು.


ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ಸೊದೋಮಿನ ಅಧಿಪತಿಗಳೇ, ಯೆಹೋವನ ಸಂದೇಶವನ್ನು ಕೇಳಿರಿ. ಗೊಮೋರದ ಜನರೇ, ಆತನ ಉಪದೇಶವನ್ನು ಕೇಳಿರಿ.


ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ, ಸಮಾಧಾನವಾಗಿಯೂ ಮೌನವಾಗಿಯೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು.


ಯಾಕೆಂದರೆ ನಾವು ಲೆಕ್ಕವಿಲ್ಲದಷ್ಟು ದ್ರೋಹಗಳನ್ನು ದೇವರಿಗೆ ವಿರುದ್ಧವಾಗಿ ಮಾಡಿರುತ್ತೇವೆ. ನಾವು ಮಾಡಿದ್ದು ತಪ್ಪೆಂದು ನಮ್ಮ ಪಾಪಗಳೇ ತೋರಿಸುತ್ತವೆ. ಹೌದು, ನಾವು ಈ ಕಾರ್ಯಗಳನ್ನು ಮಾಡಿ ದೋಷಿಗಳಾಗಿದ್ದೇವೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ನಾಚಿಕೆಯಿಲ್ಲದ ಸೂಳೆಯಂತೆ ನೀನು ಮಾಡಿದ ಈ ಎಲ್ಲಾ ಕಾರ್ಯಗಳಿಂದ ನಾನು ನಿನ್ನ ವಿರುದ್ಧ ಕೋಪದಿಂದ ತುಂಬಿರುವೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು.


ದೇವರು ಹೇಳಿದ್ದೇನೆಂದರೆ, “ನಿನ್ನ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನ್ನಲು ಬೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಬಡವರಿಗೆ ಸಹಾಯ ಮಾಡಲಿಲ್ಲ.


ಮರುದಿನ, ಹಿರಿಯ ಮಗಳು ತನ್ನ ತಂಗಿಗೆ, “ಕಳೆದ ರಾತ್ರಿ ನಾನು ನನ್ನ ತಂದೆಯೊಂದಿಗೆ ಮಲಗಿಕೊಂಡೆ. ಈ ರಾತ್ರಿಯೂ ಅವನನ್ನು ದ್ರಾಕ್ಷಾರಸ ಕುಡಿಸಿ ಅಮಲೇರಿಸೋಣ. ಆಮೇಲೆ ನೀನು ಹಾಸಿಗೆಯ ಮೇಲೆ ಅವನೊಂದಿಗೆ ಮಲಗಿಕೊಳ್ಳಬಹುದು. ಹೀಗೆ ನಾವು ಮಕ್ಕಳನ್ನು ನಮ್ಮ ತಂದೆಯಿಂದಲೇ ಪಡೆದುಕೊಳ್ಳೋಣ” ಎಂದು ಹೇಳಿದಳು.


ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು