Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:10 - ಪರಿಶುದ್ದ ಬೈಬಲ್‌

10 ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:10
39 ತಿಳಿವುಗಳ ಹೋಲಿಕೆ  

ಅಂಥ ಜನರು ನಮ್ಮ ಪ್ರಭುವಾದ ಕ್ರಿಸ್ತನ ಸೇವೆ ಮಾಡುತ್ತಿಲ್ಲ. ಅವರು ಕೇವಲ ತಮ್ಮ ಸುಖಕ್ಕಾಗಿ ಈ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೆಟ್ಟದರ ಬಗ್ಗೆ ತಿಳಿದಿಲ್ಲದ ಜನರ ಮನಸ್ಸುಗಳನ್ನು ಮೋಸಗೊಳಿಸುವುದಕ್ಕಾಗಿ ಅವರು ನಯನಾಜುಕಿನ ನುಡಿಗಳನ್ನಾಡುತ್ತಾರೆ ಮತ್ತು ಮುಖಸ್ತುತಿಯ ಮಾತುಗಳನ್ನಾಡುತ್ತಾರೆ.


ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.


“ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ.


ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು.


ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.


ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಜನರು, “ನೀನು ನಮಗೆ ಬೋಧಿಸಬೇಡ, ಆ ಕೆಟ್ಟವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ?


“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.


ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.


“ನಾನು ಸತ್ಯವನ್ನು ಹೇಳುತ್ತೇನೆ. ಆದರೆ ನೀವು ನನ್ನನ್ನು ನಂಬುವುದಿಲ್ಲ.


ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.


ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.


ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ?


ಆಗ ಯಾಜಕರು ಮತ್ತು ಪ್ರವಾದಿಗಳು ಅಧಿಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಬೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.


ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.


ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.


(ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)


ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.


ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ?


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು