12 ಇಸ್ರೇಲಿನ ಪರಿಶುದ್ಧನು ಹೇಳುವುದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ.
ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.
ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.
ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.
“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.
ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.
ಯೆಹೋವನು ಹೀಗೆನ್ನುತ್ತಾನೆ: “ಈ ಮಕ್ಕಳನ್ನು ನೋಡಿರಿ, ಅವರು ನನಗೆ ವಿಧೇಯರಾಗುತ್ತಿಲ್ಲ. ಅವರು ಯೋಜನೆಗಳನ್ನು ತಯಾರಿಸುತ್ತಾರೆ, ಆದರೆ ನನ್ನಿಂದ ಸಹಾಯವನ್ನು ಕೇಳುತ್ತಿಲ್ಲ. ಅವರು ಬೇರೆ ರಾಜ್ಯಗಳೊಂದಿಗೆ ಒಪ್ಪಂದ ಮಾಡುತ್ತಾರೆ; ಆದರೆ ನನ್ನ ಆತ್ಮವು ಅದಕ್ಕೆ ಒಪ್ಪುತ್ತಿಲ್ಲ. ಈ ಜನರು ತಮ್ಮ ಪಾಪಗಳಿಗೆ ಇನ್ನೂ ಹೆಚ್ಚು ಪಾಪವನ್ನು ಕೂಡಿಸಿಟ್ಟುಕೊಳ್ಳುತ್ತಾರೆ.
ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.
ನಾಯಕರಿಗೂ ಹಿರಿಯರಿಗೂ ಅವರು ಮಾಡಿದ ಕಾರ್ಯಗಳ ವಿರುದ್ಧವಾಗಿ ಆತನು ನ್ಯಾಯತೀರಿಸುವನು. ಯೆಹೋವನು ಹೇಳುವುದೇನೆಂದರೆ: “ನೀವು ದಾಕ್ಷಾತೋಟವನ್ನು (ಯೆಹೂದವನ್ನು) ಸುಟ್ಟುಹಾಕಿದ್ದೀರಿ; ಬಡಜನರಿಂದ ನೀವು ಕಿತ್ತುಕೊಂಡ ವಸ್ತುಗಳನ್ನು ಈಗಲೂ ನಿಮ್ಮ ಮನೆಗಳಲ್ಲಿ ಇಟ್ಟುಕೊಂಡಿದ್ದೀರಿ.
ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.
ಸಮಾರ್ಯವು ಎಫ್ರಾಯೀಮಿನ ರಾಜಧಾನಿಯಾಗಿರುವಷ್ಟು ಕಾಲ ಮತ್ತು ರೆಮಲ್ಯನ ಮಗನು ಸಮಾರ್ಯದಲ್ಲಿ ಅರಸನಾಗಿರುವಷ್ಟು ಕಾಲ ಅವರ ಯೋಜನೆಗಳು ಕೈಗೂಡುವುದಿಲ್ಲ. ನೀನು ಈ ವಾರ್ತೆಯನ್ನು ನಂಬದಿದ್ದರೆ ಜನರು ನಿನ್ನ ಮಾತನ್ನು ನಂಬದಿರಲಿ.”
ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.
ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.
ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.