Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:18 - ಪರಿಶುದ್ದ ಬೈಬಲ್‌

18 ಯೆಹೋವನು ನಿಮಗೆ ಕರುಣೆ ತೋರಿಸಲು ಇಷ್ಟಪಡುತ್ತಾನೆ. ಆತನು ನಿಮ್ಮನ್ನು ಎದುರು ನೋಡುತ್ತಿದ್ದಾನೆ. ಆತನು ಎದ್ದು ನಿಮ್ಮನ್ನು ಸಂತೈಸಲು ಬಯಸುತ್ತಾನೆ. ದೇವರಾದ ಯೆಹೋವನು ನ್ಯಾಯವಂತನಾಗಿದ್ದಾನೆ. ಆತನ ಸಹಾಯವನ್ನು ನಿರೀಕ್ಷಿಸುವವರೆಲ್ಲರೂ ಆಶೀರ್ವದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:18
69 ತಿಳಿವುಗಳ ಹೋಲಿಕೆ  

ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.


ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.


ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.


ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.


ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.


ಯೆಹೋವನು ಹೇಳುವುದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.


ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!


ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.


ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.


ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.


ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.


ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.


ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!


ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


“ಆದ್ದರಿಂದ ನಾನು (ಯೆಹೋವನು) ಆಕೆಯೊಂದಿಗೆ ಸರಸ ಸಲ್ಲಾಪವಾಡುವೆನು. ಆಕೆಯನ್ನು ಮರುಭೂಮಿಗೆ ನಡೆಸಿ ಆಕೆಯೊಂದಿಗೆ ನಯನುಡಿಗಳಿಂದ ಮಾತಾಡುವೆನು.


“ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.


ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


“ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.


ಹತ್ತು ದಿನಗಳ ನಂತರ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಬಂದಿತು.


ಕಾದುಕೊಂಡು ಒಂದು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳಿರುವವನು ಧನ್ಯನು.


ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”


ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು