Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:7 - ಪರಿಶುದ್ದ ಬೈಬಲ್‌

7 ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಐಗುಪ್ತದ ಸಹಾಯವು ವ್ಯರ್ಥವೇ ವ್ಯರ್ಥ; ಆದದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:7
20 ತಿಳಿವುಗಳ ಹೋಲಿಕೆ  

ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.


ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.


“ಆಹಾಜನಿಗೆ ಹೀಗೆ ಹೇಳು: ‘ಶಾಂತನಾಗಿದ್ದು ಜಾಗ್ರತೆಯಿಂದಿರು. ಭಯಪಡಬೇಡ. ರೆಚೀನ್ ಮತ್ತು ರೆಮಲ್ಯನ ಮಗ ಇವರಿಬ್ಬರೂ ಸೇರಿ ನಿನ್ನನ್ನು ಬೆದರಿಸದಂತೆ ನೋಡಿಕೋ. ಅವರಿಬ್ಬರೂ ಸುಟ್ಟುಹೋದ ಕೋಲಿನಂತಿದ್ದಾರೆ. ಹಿಂದೆ ಅವರು ಬೆಂಕಿಯಿಂದ ಉರಿಯುತ್ತಿದ್ದರು. ಆದರೆ ಈಗ ಅವರು ಕೇವಲ ಹೊಗೆಯಾಡುತ್ತಿದ್ದಾರೆ. ರೆಚೀನ್, ಅರಾಮ್ ಮತ್ತು ರೆಮಲ್ಯನ ಮಗ ಕೋಪಗೊಂಡಿದ್ದಾರೆ.


ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.


“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.


ದೇವರು ತನ್ನ ಕೋಪವನ್ನು ತಡೆಹಿಡಿದುಕೊಳ್ಳುವುದಿಲ್ಲ. ರಹಬನ ಸಹಾಯಕರು ಸಹ ದೇವರ ಮುಂದೆ ಭಯದಿಂದ ಅಡ್ಡಬೀಳುವರು.


ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.


ರಹಾಬನನ್ನು ಸೋಲಿಸಿದಾತನು ನೀನೇ. ನಿನ್ನ ಭುಜಬಲದಿಂದ ನೀನು ಶತ್ರುಗಳನ್ನು ಚದರಿಸಿಬಿಟ್ಟಿ.


ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.


ಸಮುದ್ರ ತೀರದಲ್ಲಿ ವಾಸಿಸುವವರು ಹೀಗೆ ಹೇಳುವರು: “ಆ ದೇಶದವರು ನಮಗೆ ಸಹಾಯ ಮಾಡುವರೆಂದು ಅವರನ್ನು ನಂಬಿದೆವು. ಅಶ್ಶೂರದ ಅರಸನಿಂದ ನಮ್ಮನ್ನು ಕಾಪಾಡುವಂತೆ ನಾವು ಅವರ ಬಳಿಗೆ ಓಡಿಹೋದೆವು. ಆದರೆ ಈಗ ನೋಡಿ, ಆ ದೇಶದವರು ಸೋತು ಹೋಗಿ ವೈರಿವಶವಾಗಿದ್ದಾರೆ. ಈಗ ನಾವು ಪಾರಾಗಲು ಹೇಗೆ ಸಾಧ್ಯ?”


ಆದರೆ ಅವರು ನಿರಾಶರಾಗುವರು. ತಮಗೆ ಸಹಾಯ ಮಾಡಲಶಕ್ಯವಾದ ರಾಜ್ಯಗಳಿಗೆ ಸಹಾಯಕ್ಕಾಗಿ ಹೋಗಿದ್ದಾರೆ. ಈಜಿಪ್ಟು, ನಿಷ್ಪ್ರಯೋಜಕವಾಗಿದೆ. ಅದು ಸಹಾಯ ಮಾಡದು. ಅದು ನಾಚಿಕೆ, ಅವಮಾನಗಳನ್ನು ಕೊಡುವದು.”


ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?


ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನುವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು