Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:8 - ಪರಿಶುದ್ದ ಬೈಬಲ್‌

8 ಎಲ್ಲಾ ಜನರಿಗೆ ಕಾಣುವಂತೆ ಇದನ್ನು ಹಲಗೆಯ ಮೇಲೆ ಬರೆ; ಪುಸ್ತಕದಲ್ಲೂ ಬರೆ. ಕೊನೆಯ ದಿವಸಗಳಿಗಾಗಿ ಇದನ್ನು ಬರೆ. ಬಹುಕಾಲದ ನಂತರ ಇದು ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 [ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:8
22 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ.


ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)


ಅದೇ ದಿವಸದಲ್ಲಿ ಮೋಶೆಯು ಹಾಡನ್ನು ಬರೆದಿಟ್ಟನು. ಇಸ್ರೇಲ್ ಜನರಿಗೆ ಆ ಹಾಡನ್ನು ಕಲಿಸಲಾಯಿತು.


ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.


“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


“ಆದ್ದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.


ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.


ನೀವು ಕಷ್ಟದಲ್ಲಿ ಬಿದ್ದಾಗ, ಅವೆಲ್ಲಾ ನಿಮಗೆ ಸಂಭವಿಸಿದಾಗ ನೀವು ನಿಮ್ಮ ದೇವರಾದ ಯೆಹೋವನ ಬಳಿಗೆ ಹಿಂದಿರುಗಿಬಂದು ಆತನಿಗೆ ವಿಧೇಯರಾಗುವಿರಿ.


ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.


ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”


“ಮೋವಾಬಿನ ಜನರನ್ನು ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಬ್ಯರನ್ನು ಪುನಃ ಕರೆದು ತರುವೆನು” ಇದು ಯೆಹೋವನಿಂದ ಬಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.


ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.


ಯೆಹೋವನ ಸುರುಳಿಯನ್ನು ನೋಡಿರಿ. ಅಲ್ಲಿ ಬರೆದಿರುವದನ್ನು ಓದಿರಿ. ಅದರಲ್ಲಿ ಯಾವದೂ ಕಳೆದುಹೋಗಿಲ್ಲ. ಆ ಪ್ರಾಣಿಗಳು ಒಟ್ಟಾಗಿ ವಾಸಿಸುವವೆಂದು ಆ ಸುರುಳಿಯಲ್ಲಿ ಬರೆದದೆ. ಅವುಗಳನ್ನು ಒಟ್ಟಾಗಿ ಸೇರಿಸುತ್ತೇನೆಂದು ದೇವರು ಹೇಳಿದ್ದಾನೆ. ಆದ್ದರಿಂದ ಯೆಹೋವನ ಆತ್ಮವು ಅವುಗಳನ್ನು ಒಟ್ಟಾಗಿ ಸೇರಿಸುವದು.


ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.


ಆಗ ಯೆರೆಮೀಯನು ಬಾರೂಕನೆಂಬ ಒಬ್ಬ ವ್ಯಕ್ತಿಯನ್ನು ಕರೆದನು. ಬಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನ್ನು ಹೇಳುತ್ತಿದ್ದಾಗ ಬಾರೂಕನು ಆ ಸಂದೇಶವನ್ನು ಸುರುಳಿಯ ಮೇಲೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು