Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:14 - ಪರಿಶುದ್ದ ಬೈಬಲ್‌

14 ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:14
27 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಆ ಮಹಾನಗರವು ನಿರ್ಜನವಾಗಿರುವದು. ಅದು ಮರುಭೂಮಿಯಂತಿರುವದು. ಜನರೆಲ್ಲರೂ ಹೊರಟುಹೋಗಿರುವರು. ಅವರು ಪಲಾಯನಗೈದಿದ್ದಾರೆ. ನಗರವು ತೆರೆದ ಹುಲ್ಲುಗಾವಲಿನಂತಿರುವುದು. ಪಶುಗಳು ಅಲ್ಲಿ ಹುಲ್ಲನ್ನು ಮೇಯುತ್ತವೆ. ದನಗಳು ದ್ರಾಕ್ಷಾಲತೆಯ ಚಿಗುರೆಲೆಗಳನ್ನು ತಿನ್ನುವವು.


ನೀನು ವಿದೇಶದ ಪಟ್ಟಣವನ್ನು ಕೆಡವಿಹಾಕಿರುವೆ. ಆ ಪಟ್ಟಣವು ಮಹಾಗೋಡೆಗಳಿಂದ ಸಂರಕ್ಷಿಸಲ್ಪಟ್ಟದ್ದಾಗಿತ್ತು. ಆದರೆ ಈಗ ಅದು ಕೇವಲ ಕಲ್ಲುಗಳ ರಾಶಿ. ಅರಮನೆಯು ಕೆಡವಲ್ಪಟ್ಟಿದೆ. ಅದನ್ನು ತಿರುಗಿ ಕಟ್ಟಲು ಸಾಧ್ಯವೇ ಇಲ್ಲ.


ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.


ಈ ನಗರಕ್ಕೆ “ಪೂರ್ಣ ಗಲಿಬಿಲಿ” ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು.


ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.


“ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ.


ಆಗ ನಾನು, “ಒಡೆಯನೇ, ಎಷ್ಟರ ತನಕ ನಾನು ಹೀಗೆ ಮಾಡಬೇಕು?” ಎಂದು ವಿಚಾರಿಸಿದೆನು. ಅದಕ್ಕೆ ಯೆಹೋವನು, “ನಗರಗಳು ನಾಶವಾಗುವ ತನಕ ಹೀಗೆಯೇ ಮಾಡು. ಮನೆಗಳಲ್ಲಿ ಜನರು ಇಲ್ಲದೆ ಹೋಗುವವರೆಗೆ ಹೀಗೆಯೇ ಮಾಡು. ಇಡೀ ದೇಶವು ಹಾಳಾಗಿ ಬೆಂಗಾಡಾಗುವ ತನಕ ಹೀಗೆಯೇ ಮಾಡುತ್ತಿರು” ಎಂದು ಹೇಳಿದನು.


ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು.


ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ.


ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.


ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.


ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.


ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. ನಾವು ಜೆರುಸಲೇಮಿನ ಭದ್ರವಾದ ರಕ್ಷಣಾಸ್ಥಳಗಳನ್ನು ನಾಶಮಾಡೋಣ.”


ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಬಹುದಾದ ಸಸಿಗಳು ಬೆಳೆದಿಲ್ಲ.”


ಯೆಹೋವನು ಇಸ್ರೇಲಿನ ದೇವರಾಗಿದ್ದಾನೆ. ಜೆರುಸಲೇಮಿನಲ್ಲಿನ ಮನೆಗಳ ಬಗ್ಗೆಯೂ ಮತ್ತು ಯೆಹೂದದ ರಾಜರ ಅರಮನೆಗಳ ಬಗ್ಗೆಯೂ ಯೆಹೋವನು ಹೀಗೆ ಹೇಳುತ್ತಾನೆ. ವೈರಿಗಳು ಆ ಮನೆಗಳನ್ನು ಕೆಡವಿಬಿಡುತ್ತಾರೆ. ವೈರಿಗಳು ನಗರದ ಕೋಟೆಗೋಡೆಗಳ ತುದಿಯವರೆಗೂ ಇಳಿಜಾರಾದ ಗೋಡೆಗಳನ್ನು ಕಟ್ಟುತ್ತಾರೆ. ವೈರಿಗಳು ಖಡ್ಗ ಹಿಡಿದು ಈ ನಗರದ ಜನರೊಂದಿಗೆ ಕಾದಾಡುವರು.


ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ಆ ದೇಶವು ಯೆಹೂದದಲ್ಲಿ ಅಳಿದುಳಿದವರಿಗೆ ಆಗುವದು. ಯೆಹೂದದಲ್ಲಿರುವ ಜನರನ್ನು ಯೆಹೋವನು ನೆನಪುಮಾಡುವನು. ಅವರು ಸೆರೆಯಾಳುಗಳಾಗಿ ಅನ್ಯದೇಶದಲ್ಲಿರುವರು. ಆದರೆ ಯೆಹೋವನು ಅವರನ್ನು ಹಿಂದಕ್ಕೆ ತರುವನು. ಆಗ ಯೆಹೂದದ ಜನರು ಆ ಬಯಲಿನಲ್ಲಿ ತಮ್ಮ ಕುರಿಮಂದೆಗಳನ್ನು ಮೇಯಿಸುವರು. ಸಾಯಂಕಾಲ ಬರಿದಾದ ಅಷ್ಕೆಲೋನಿನ ಮನೆಗಳಲ್ಲಿ ತಂಗುವರು.


ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.


ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;


ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.


ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು