Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:17 - ಪರಿಶುದ್ದ ಬೈಬಲ್‌

17 ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:17
35 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.


ದೇವರಾದ ಯೆಹೋವನು ಹೇಳಿದ್ದು ನನಗೆ ಕೇಳಿಸಿತು. ತನ್ನ ಜನರಿಗೂ ತನ್ನ ಸದ್ಭಕ್ತರಿಗೂ ಶಾಂತಿ ಇರುವುದೆಂದು ಆತನು ಹೇಳಿದನು. ಆದ್ದರಿಂದ ಅವರು ತಮ್ಮ ಮೂಢಜೀವನಕ್ಕೆ ಹೋಗಕೂಡದು.


ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.


ಹೀಗೆ ಪ್ರೀತಿಯು ನಮ್ಮಲ್ಲಿ ಪರಿಪೂರ್ಣವಾಗುವುದರಿಂದ ದೇವರು ನಮಗೆ ತೀರ್ಪು ನೀಡುವ ದಿನದಂದು ನಾವು ನಿರ್ಭಯದಿಂದಿರುತ್ತೇವೆ. ಈ ಲೋಕದಲ್ಲಿ ನಾವು ಆತನಂತೆಯೇ (ಕ್ರಿಸ್ತನು ಅಥವಾ ದೇವರು) ಇರುವುದರಿಂದ ನಾವು ಧೈರ್ಯದಿಂದಿರುತ್ತೇವೆ.


ನಾನು ಇಸ್ರೇಲ್ ಜನಾಂಗದವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ಅನಂತರ ನಾನು ಎಂದಿಗೂ ಅವರಿಗೆ ವಿಮುಖನಾಗಿರುವದಿಲ್ಲ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾನು ಅವರಿಗೆ ‘ಸಮಾಧಾನ’ ಎಂಬ ಹೊಸ ಪದವನ್ನು ಕಲಿಸುತ್ತೇನೆ. ನನ್ನ ಬಳಿಯಲ್ಲಿರುವವರಿಗೂ ನನ್ನಿಂದ ದೂರದಲ್ಲಿರುವವರಿಗೂ ಸಮಾಧಾನವನ್ನು ಅನುಗ್ರಹಿಸುವೆನು. ನಾನು ಅವರನ್ನು ಗುಣಪಡಿಸುವೆನು.” ಇದು ಯೆಹೋವನ ನುಡಿ.


“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.


ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನಾನು ನನ್ನ ಸೇವಕನಾದ ಯಾಕೋಬನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.


ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.


ನನ್ನ ಒಡೆಯನೂ ದೇವರೂ ಇಸ್ರೇಲಿನ ಪರಿಶುದ್ಧನೂ ಹೇಳುವುದೇನೆಂದರೆ, “ನೀವು ನನ್ನ ಕಡೆಗೆ ತಿರುಗಿಕೊಳ್ಳುವುದಾದರೆ ನೀವು ರಕ್ಷಿಸಲ್ಪಡುವಿರಿ. ನೀವು ತಾಳ್ಮೆಯಿಂದ ನನ್ನ ಮೇಲೆ ಭರವಸೆಯಿಟ್ಟರೆ, ನೀವು ಬಲವನ್ನು ಹೊಂದುವಿರಿ.” ಆದರೆ ಹಾಗೆ ಮಾಡಲು ನಿಮಗೆ ಇಷ್ಟವಿಲ್ಲ.


ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ.


ಯೆಹೋವನಲ್ಲಿ ಭಯಭಕ್ತಿಯುಳ್ಳವನು ಕ್ಷೇಮವಾಗಿರುವನು; ಅವನ ಮಕ್ಕಳು ಸಹ ಕ್ಷೇಮವಾಗಿರುವರು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.


ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.


ಆ ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ವಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಈ ಧ್ವಜವು ತೋರಿಸುವುದು. ಆ ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು.


ಹಿಂದಿನ ಕಾಲದಲ್ಲಿ ದೇವರು ಅವರ ಸಂಗಡ ಮಾತನಾಡಿ, “ಇಲ್ಲಿ ವಿಶ್ರಾಂತಿಯ ಸ್ಥಳವಿದೆ, ಇದು ವಿಶ್ರಮಿಸುವ ಸ್ಥಳ. ಆಯಾಸಗೊಂಡವರೇ, ಬಂದು ವಿಶ್ರಮಿಸಿರಿ. ಇದು ಸಮಾಧಾನಕರವಾದ ಸ್ಥಳ” ಎಂದು ಹೇಳುತ್ತಿದ್ದನು. ಆದರೆ ಜನರಿಗೆ ಆತನ ಮಾತುಗಳನ್ನು ಕೇಳಲು ಇಷ್ಟವಾಗಲಿಲ್ಲ.


ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರ ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.


ಆದರೆ ನನಗೆ ವಿಧೇಯನಾಗುವವನು ಕ್ಷೇಮವಾಗಿಯೂ ಸುಖವಾಗಿಯೂ ಬದುಕುವನು. ಅವನು ಅಪಾಯಕ್ಕೆ ಭಯಪಡುವ ಅವಶ್ಯವಿಲ್ಲ.”


ಜೆರುಸಲೇಮೇ, ನೀನು ಐಶ್ವರ್ಯವಂತಳಾಗಿರುವೆ. ನೀನು ದೇವರ ವಿಷಯವಾದ ಜ್ಞಾನ, ತಿಳುವಳಿಕೆ ಮತ್ತು ರಕ್ಷಣೆಗಳಿಂದ ಐಶ್ವರ್ಯವಂತಳಾಗಿರುವೆ. ಯೆಹೋವನ ಮೇಲೆ ನಿನಗಿರುವ ಗೌರವವೇ ನಿನ್ನ ಭಂಡಾರವಾಗಿದೆ. ನೀನು ಹೀಗೆಯೇ ಮುಂದುವರಿಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು