Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:2 - ಪರಿಶುದ್ದ ಬೈಬಲ್‌

2 ಹೀಗಿದ್ದಲ್ಲಿ ರಾಜನು ಮಳೆಯಲ್ಲಿ ಆಶ್ರಯ ಸ್ಥಳವಾಗಿಯೂ ಗಾಳಿಯಲ್ಲಿ ಮರೆಯಂತೆಯೂ ಮರುಭೂಮಿಯಲ್ಲಿ ಒರತೆಯಂತೆಯೂ ಬೆಂಗಾಡಿನಲ್ಲಿ ಬಂಡೆಯ ನೆರಳಿನಂತೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:2
29 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.


“ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.


ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ; ಶತ್ರುಗಳಿಂದ ನನ್ನನ್ನು ರಕ್ಷಿಸು.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


“ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಅವರು, “ನಮಗೆ ಸಹಾಯ ಮಾಡಿರಿ! ನಾವು ಮಾಡಬೇಕಾದದ್ದನ್ನು ತಿಳಿಸಿರಿ! ವೈರಿಗಳಿಂದ ನಮ್ಮನ್ನು ರಕ್ಷಿಸಿರಿ. ನಮ್ಮನ್ನು ನಡುಮಧ್ಯಾಹ್ನದ ಸೂರ್ಯನ ಶಾಖದಿಂದ ನೆರಳು ಕಾಪಾಡುವಂತೆ ನಮ್ಮನ್ನು ಕಾಪಾಡಿರಿ. ನಾವು ನಮ್ಮ ಶತ್ರುಗಳಿಂದ ಓಡಿಹೋಗುತ್ತಿದ್ದೇವೆ. ನಮ್ಮನ್ನು ಅಡಗಿಸಿಡಿರಿ, ವೈರಿಗಳ ಕೈಗೆ ನಮ್ಮನ್ನು ಕೊಡಬೇಡಿರಿ.


ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.


ಇದು ಯೆಹೋವನ ನುಡಿ: “ನಾನು ಇಸ್ರೇಲಿನ ಮತ್ತು ಯೆಹೂದದ ಜನರಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದೆ. ನನ್ನ ವಾಗ್ದಾನವು ನೆರವೇರುವ ಸಮಯ ಬರುತ್ತಿದೆ.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು