Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:14 - ಪರಿಶುದ್ದ ಬೈಬಲ್‌

14 ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಕೆಟ್ಟಕಾರ್ಯಗಳನ್ನು ಮಾಡುವವರು ಹೆದರಿಕೆಯಿಂದ ನಡುಗುವರು. ಜನರು, “ನಮ್ಮಲ್ಲಿ ಯಾರು ನಾಶಮಾಡುವ ಈ ಬೆಂಕಿಯ ಜೊತೆ ಜೀವಿಸಬಲ್ಲರು? ನಿತ್ಯಕಾಲಕ್ಕೂ ಸುಡುವ ಈ ಬೆಂಕಿಯ ಬಳಿಯಲ್ಲಿ ಯಾರು ವಾಸಮಾಡಬಲ್ಲರು?” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:14
44 ತಿಳಿವುಗಳ ಹೋಲಿಕೆ  

ಏಕೆಂದರೆ ನಮ್ಮ “ದೇವರು ನಾಶಮಾಡುವ ಬೆಂಕಿಯಂತಿದ್ದಾನೆ.”


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


“ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಎಸೆದುಬಿಡು. ಕೈಯನ್ನಾಗಲಿ ಕಾಲನ್ನಾಗಲಿ ಕಳೆದುಕೊಂಡು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ. ಎರಡು ಕೈ ಮತ್ತು ಎರಡು ಕಾಲುಳ್ಳವನಾಗಿದ್ದು ಶಾಶ್ವತವಾದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅದು ಎಷ್ಟೋ ಉತ್ತಮ.


“ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”


ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.


ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.


ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


‘ಸ್ನೇಹಿತನೇ, ನೀನು ಒಳಗೆ ಹೇಗೆ ಬಂದೆ? ನೀನು ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲವಲ್ಲಾ’ ಅಂದನು. ಆದರೆ ಅವನು ಉತ್ತರ ನೀಡಲಿಲ್ಲ.


ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.


ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.


ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯುದ್ಧಮಾಡಲು ನಾನು ಅಶ್ಶೂರವನ್ನು ಕಳುಹಿಸುವೆನು. ನಾನು ಅವರ ಮೇಲೆ ಕೋಪಗೊಂಡಿರುವೆನು. ಅಶ್ಶೂರಕ್ಕೆ ಅವರ ಮೇಲೆ ಯುದ್ಧ ಮಾಡುವಂತೆ ಆಜ್ಞಾಪಿಸುವೆನು. ಅಶ್ಶೂರವು ಅವರನ್ನು ಸೋಲಿಸಿ ಅವರ ಐಶ್ವರ್ಯವನ್ನೆಲ್ಲಾ ಸೂರೆಮಾಡುವದು. ಇಸ್ರೇಲು ಅಶ್ಶೂರದವರಿಗೆ ಬೀದಿಯ ಧೂಳಿನಂತಾಗುವದು.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.


ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.


ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ನೀವು ಇತರ ದೇವರುಗಳನ್ನು ಪೂಜಿಸುವುದನ್ನು ಜೀವಸ್ವರೂಪನಾದ ಯೆಹೋವನು ದ್ವೇಷಿಸುವುದರಿಂದ ಬೆಂಕಿಯಂತೆ ಆತನು ನಿಮ್ಮನ್ನು ದಹಿಸಿ ಬಿಡುವನು.


ಆದರೆ ಎಲ್ಲಾ ಕೊಲೆಗಾರರೂ ದುಷ್ಟರೂ ನಾಶಮಾಡಲ್ಪಡುವರು. ಅವರು ಯೆಹೋವನನ್ನು ಹಿಂಬಾಲಿಸುವವರಲ್ಲ.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.


ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.


ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.


“ನನ್ನ ಜನರಲ್ಲಿ ಪಾಪಿಗಳು ಹೇಳುತ್ತಾರೆ: ‘ನಮಗೆ ಯಾವ ಕೇಡೂ ಸಂಭವಿಸುವುದಿಲ್ಲ.’ ಆದರೆ ಅವರೆಲ್ಲಾ ಕತ್ತಿಯಿಂದ ಸಾಯುವರು.”


“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು