Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:17 - ಪರಿಶುದ್ದ ಬೈಬಲ್‌

17 ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನೇ ಇವುಗಳಿಗೆ ಪಾಲುಮಾಡಿಕೊಟ್ಟಿದ್ದಾನೆ, ಆತನ ಕೈಯೇ ನೂಲುಹಾಕಿ ದೇಶವನ್ನು ಹಂಚಿದೆ; ಅದು ಇವುಗಳಿಗೆ ನಿತ್ಯಸ್ವಾಸ್ತ್ಯವಾಗುವದು, ಅವು ತಲತಲಾಂತರಕ್ಕೂ ಅಲ್ಲಿ ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ. ಅವರ ಕೈಯೇ ಅದನ್ನು ಗೆರೆ ಎಳೆದು, ಅವರಿಗೆ ಹಂಚಿಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿಕೊಳ್ಳುವುವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:17
11 ತಿಳಿವುಗಳ ಹೋಲಿಕೆ  

ಬೆಂಕಿಯು ಹಗಲಿರುಳು ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ಆ ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ಆ ದೇಶದೊಳಗೆ ಯಾರೂ ಪ್ರಯಾಣ ಮಾಡುವದಿಲ್ಲ.


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.


ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ. ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.


ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.


ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು “ಬೆಂಗಾಡಿನ ಮರುಭೂಮಿ” ಎಂದು ಕರೆಯಲ್ಪಡುವದು.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು