Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:16 - ಪರಿಶುದ್ದ ಬೈಬಲ್‌

16 “‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:16
16 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”


ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.


ಪ್ರತಿಯೊಬ್ಬನೂ ತನ್ನ ದ್ರಾಕ್ಷಾಲತೆಯ ನೆರಳಿನಲ್ಲಿ ಕುಳಿತುಕೊಳ್ಳುವನು. ಅವರು ಅಂಜೂರದ ಮರದಡಿಯಲ್ಲಿ ವಿಶ್ರಾಂತಿಯಲ್ಲಿರುವರು. ಯಾರೂ ಅವರನ್ನು ಭಯಗೊಳಿಸುವದಿಲ್ಲ. ಯಾಕೆಂದರೆ ಸರ್ವಶಕ್ತನಾದ ಯೆಹೋವನು ಹೀಗೆ ಆಗುವದೆಂದು ಹೇಳಿದ್ದಾನೆ.


ಆದ್ದರಿಂದ ನಾನು ಬರುವುದಕ್ಕಿಂತ ಮೊದಲು ನಿಮ್ಮ ಬಳಿಗೆ ಹೋಗುವಂತೆ ಈ ಸಹೋದರರನ್ನು ಕೇಳಿಕೊಳ್ಳಬೇಕೆಂದು ನಾನು ಆಲೋಚಿಸಿದೆನು. ನೀವು ವಾಗ್ದಾನ ಮಾಡಿದ ಸಹಾಯಧನವನ್ನು ಇವರು ಸಂಗ್ರಹಿಸುವರು. ಆಗ, ನಾವು ಬರುವಷ್ಟರಲ್ಲಿ ನಿಮ್ಮ ಸಹಾಯಧನವು ಸಿದ್ಧವಾಗಿರುವುದು. ಈ ಸಹಾಯಧನವು ನಿಮ್ಮ ಹೃತ್ಪೂರ್ವಕವಾದ ದಾನವೇ ಹೊರತು ಸಂಕಟದಿಂದ ಕೊಟ್ಟ ದಾನವಲ್ಲ.


ನಿನ್ನ ಸ್ವಂತ ಹೆಂಡತಿಗೆ ನಂಬಿಗಸ್ತನಾಗಿರು; ನಿನ್ನ ಪ್ರೀತಿಯು ಆಕೆಗೆ ಮಾತ್ರ ಸಲ್ಲಲಿ.


ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: “‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.


ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.


ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು.


ಯಾಬೇಷಿನ ಹಿರಿಯರು ನಾಹಾಷನಿಗೆ, “ನಮಗೆ ಏಳು ದಿನಗಳವರೆಗೆ ಸಮಯ ಕೊಡು. ನಾವು ಇಸ್ರೇಲಿನ ಎಲ್ಲಾ ಕಡೆಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ರಕ್ಷಿಸಲು ಯಾರೂ ಬರದಿದ್ದರೆ ನಾವೆಲ್ಲ ನಿನ್ನ ಬಳಿಗೆ ಬರುತ್ತೇವೆ ಹಾಗೂ ನಿನಗೆ ಅಧೀನರಾಗುತ್ತೇವೆ” ಎಂದು ಹೇಳಿದರು.


ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.


ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.


ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.


ಹೀಗೆ ನೀವು ಸೇವಿಸುತ್ತಾ ಇದ್ದರೆ ನಾನು ಬಂದು ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ನಿಮ್ಮನ್ನು ಕರೆದೊಯ್ಯವೆನು. ಆ ಹೊಸ ದೇಶದಲ್ಲಿ ನೀವು ಒಳ್ಳೆಯ ಧಾನ್ಯವನ್ನು ಮತ್ತು ಹೊಸ ದ್ರಾಕ್ಷಾರಸವನ್ನು, ರೊಟ್ಟಿಯನ್ನು ಮತ್ತು ದ್ರಾಕ್ಷಿತೋಟಗಳನ್ನು ಹೊಂದುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು