Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:1 - ಪರಿಶುದ್ದ ಬೈಬಲ್‌

1 ಅರಸನಾದ ಹಿಜ್ಕೀಯನು ಎಲ್ಲಾ ವಿಷಯಗಳನ್ನು ಕೇಳಿ ಮನಸ್ಸಿನಲ್ಲಿ ಬಹಳ ದುಃಖಪಟ್ಟು ತನ್ನ ಬಟ್ಟೆಗಳನ್ನು ಹರಿದುಕೊಂಡನು. ತರುವಾಯ ಶೋಕವಸ್ತ್ರವನ್ನು ಧರಿಸಿ ದೇವಾಲಯದೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಹಿಜ್ಕೀಯನು ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:1
13 ತಿಳಿವುಗಳ ಹೋಲಿಕೆ  

ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.


ಸಾಯಂಕಾಲದ ನೈವೇದ್ಯ ಸಮರ್ಪಣೆಯ ಸಮಯದಲ್ಲಿ ನಾನು ಕುಳಿತಲ್ಲಿಂದ ಎದ್ದೆನು. ನನ್ನ ಬಟ್ಟೆಗಳು ಹರಿದಿದ್ದವು. ನಾನು ಮೊಣಕಾಲೂರಿ ಕೈಗಳನ್ನು ದೇವರಾದ ಯೆಹೋವನ ಕಡೆಗೆ


ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”


ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ತಮಗೆ ಬಂದೊದಗಿದ ಸಮಸ್ಯೆಗಾಗಿ ಪರಲೋಕದ ಕಡೆಗೆ ನೋಡಿ ಗಟ್ಟಿಯಾಗಿ ಪ್ರಾರ್ಥಿಸಿದರು.


ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.


ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಜನರಿಗೆ, ಅವರ ಸತ್ತುಹೋದ ಸ್ನೇಹಿತರಿಗೋಸ್ಕರ ರೋಧಿಸಿ ದುಃಖಿಸಿರಿ ಎಂದು ಹೇಳುವನು. ಜನರು ತಮ್ಮ ತಲೆಗಳನ್ನು ಬೋಳಿಸಿ ಶೋಕವಸ್ತ್ರಗಳನ್ನು ಧರಿಸುವರು.


ಹಿಜ್ಕೀಯನು ಆ ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಯೆಹೋವನ ಆಲಯಕ್ಕೆ ಹೋಗಿ ಆ ಪತ್ರವನ್ನು ಯೆಹೋವನ ಮುಂದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು