Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:24 - ಪರಿಶುದ್ದ ಬೈಬಲ್‌

24 ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:24
21 ತಿಳಿವುಗಳ ಹೋಲಿಕೆ  

ನೀನು ದುಷ್ಟ ಅರಸನಾಗಿದ್ದೆ, ಈಗ ನಿನಗೆ ಅಂತ್ಯವು ಬಂತು. ತುರಾಯಿ ಮರಗಳೂ ಲೆಬನೋನಿನ ದೇವದಾರು ವೃಕ್ಷಗಳೂ ಹರ್ಷಗೊಂಡಿವೆ. ಆ ಮರಗಳು ಹೀಗೆ ಹೇಳುತ್ತಿವೆ: ಅರಸನು ನಮ್ಮನ್ನು ಕಡಿದುರುಳಿಸಿದನು. ಈಗ ಅರಸನೇ ಉರುಳಿಬಿದ್ದಿದ್ದಾನೆ. ಅವನು ಮತ್ತೆಂದಿಗೂ ಏಳುವುದಿಲ್ಲ.


ಆಮೇಲೆ ಆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು.


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?


ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.


ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.


“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ನಮ್ಮ ಸರ್ವಶಕ್ತನೂ ಒಡೆಯನೂ ಆಗಿರುವ ಯೆಹೋವನು ಆ ದೊಡ್ಡ ಮರವನ್ನು (ಅಶ್ಶೂರವನ್ನು) ಕಡಿದುಹಾಕುವದನ್ನು ನೋಡು! ತನ್ನ ಮಹಾಶಕ್ತಿಯಿಂದ ಆತನು ಮಹಾವೀರರೂ ದೊಡ್ಡಜನರೂ ಎನ್ನದೆ ಎಲ್ಲರನ್ನೂ ಕಡಿದುಹಾಕುವನು. ಇನ್ನುಮೇಲೆ ಅವರು ಮಹಾಜನರೆಂದು ಕರೆಯಲ್ಪಡರು.


ಯೆಹೋವನು ತನ್ನ ಕೊಡಲಿಯಿಂದ ಅಡವಿಯನ್ನು ಕಡಿದುಹಾಕುವನು. ಲೆಬನೋನಿನ ಉನ್ನತ ಮರಗಳು (ಪ್ರಮುಖರು) ಉರುಳಿಬೀಳುವವು.


ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ. ಪ್ರತಿಯೊಬ್ಬನ ಹತ್ತಿರ ಆ ಮನೆಯನ್ನು ಹಾಳುಮಾಡಲು ಬೇಕಾಗುವ ಸಾಧನಗಳಿರುವವು. ಆ ಜನರು ನಿನ್ನ ಸುಂದರವಾದ ಮತ್ತು ಗಟ್ಟಿಯಾದ ದೇವದಾರಿನ ತೊಲೆಗಳನ್ನು ಕಡಿದುಹಾಕುತ್ತಾರೆ. ಅವರು ಆ ತೊಲೆಗಳನ್ನು ಬೆಂಕಿಯಲ್ಲಿ ಎಸೆಯುತ್ತಾರೆ.


ಭೋರ್ಗರೆಯುವ ನೈಲ್ ನದಿಯಂತೆ ಈಜಿಪ್ಟ್ ಬರುತ್ತಿದೆ. ಬಲಿಷ್ಠವಾಗಿಯೂ ಮತ್ತು ರಭಸವಾಗಿಯೂ ಹರಿಯುವ ನದಿಯಂತೆ ಬರುತ್ತಿದೆ. ‘ನಾನು ಬಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನ್ನೂ ಅಲ್ಲಿದ್ದ ಜನರನ್ನೂ ನಾಶಮಾಡುವೆನು’ ಎಂದು ಈಜಿಪ್ಟ್ ಹೇಳುತ್ತಿದೆ.


ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.


“ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು