Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:26 - ಪರಿಶುದ್ದ ಬೈಬಲ್‌

26 “ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:26
17 ತಿಳಿವುಗಳ ಹೋಲಿಕೆ  

ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.


ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.


ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.


ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? ಇದರ ವಿಚಾರವಾಗಿ ನೀವು ಕೇಳಿರುವಿರಿ. ಎಷ್ಟೋ ವರ್ಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು