Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:27 - ಪರಿಶುದ್ದ ಬೈಬಲ್‌

27 ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:27
17 ತಿಳಿವುಗಳ ಹೋಲಿಕೆ  

ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು.


ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


ಆ ಸಮಯದಲ್ಲಿ ಈಜಿಪ್ಟಿನವರು ಭಯದಿಂದ ಕಂಗೆಟ್ಟ ಹೆಂಗಸರಂತಿರುವರು. ಅವರು ಸರ್ವಶಕ್ತನಾದವನಿಗೆ ಭಯಪಡುವರು. ಯೆಹೋವನು ಜನರನ್ನು ಶಿಕ್ಷಿಸಲು ತನ್ನ ಕೈಯನ್ನೆತ್ತುವನು. ಆಗ ಅವರೆಲ್ಲರೂ ಹೆದರಿಹೋಗುವರು.


ನಮ್ಮ ಜೀವಮಾನಗಳು ಕೊಂಚವೆಂಬುದು ಆತನಿಗೆ ಗೊತ್ತಿದೆ. ನಮ್ಮ ಜೀವಮಾನಗಳು ಹುಲ್ಲಿನಂತಿವೆ ಎಂಬುದೂ ಆತನಿಗೆ ತಿಳಿದಿದೆ.


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ದುಷ್ಟರು ಹುಲ್ಲಿನಂತೆಯೂ ಸೊಪ್ಪಿನಂತೆಯೂ ಬೇಗನೆ ಒಣಗಿಹೋಗುವರು.


ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ ನಿರಾಶೆಯಿಂದ ಗಲಿಬಿಲಿಗೊಂಡರು. ಜನರು ಹೊಲಗಳಲ್ಲಿನ ಹುಲ್ಲಿನಂತೆಯೂ ಹಸಿರುಗಿಡಗಳಂತೆಯೂ ಮಾಳಿಗೆಯ ಮೇಲೆ ಒಣಗಿ ಹಾಳಾಗುವ ಹುಲ್ಲಿನಂತೆಯೂ ಇದ್ದರು.


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.


ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು