28 ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.
ಯೆಹೋವನು ಹೀಗೆಂದನು: “ಬಹುಬೇಗ ಮೋವಾಬಿಗೆ ಕೋಪ ಬರುತ್ತದೆ. ಅವನು ಬಡಾಯಿ ಕೊಚ್ಚಿಕೊಳ್ಳುತ್ತಾನೆಂಬುದು ನನಗೆ ಗೊತ್ತು. ಆದರೆ ಅವನ ಬಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು.