Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:29 - ಪರಿಶುದ್ದ ಬೈಬಲ್‌

29 ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀನು ನನಗೆ ವಿರೋಧವಾಗಿ ಕುಪಿತನಾಗಿರುವದೂ ಉಬ್ಬಿಕೊಂಡಿರುವದೂ ನನಗೆ ತಿಳಿದುಬಂತು. ಆದದರಿಂದ ನಿನಗೆ ಮೂಗುದಾರವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:29
26 ತಿಳಿವುಗಳ ಹೋಲಿಕೆ  

ನಾನು ನಿನ್ನ ದವಡೆಗೆ ಕೊಕ್ಕೆ ಹಾಕಿ ನಿನ್ನನ್ನು ಸೆರೆಹಿಡಿದುಕೊಂಡು ಬರುವೆನು. ನಿನ್ನೆಲ್ಲಾ ಭೂಸೈನಿಕರನ್ನೂ ನಿನ್ನೆಲ್ಲಾ ಕುದುರೆಗಳನ್ನೂ ನಿನ್ನೆಲ್ಲಾ ರಾಹುತರನ್ನೂ ಬಂಧಿಸಿ ತರುವೆನು. ನಿನ್ನ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನ್ನು ತೊಟ್ಟುಕೊಂಡಿರುವಾಗಲೇ ಅವರನ್ನು ಬಂಧಿಸಿ ತರುವೆನು.


ಅವನು ಬಂದ ದಾರಿಯಿಂದಲೇ ಹಿಂದಕ್ಕೆ ಹೋಗುವನು. ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಇದು ಯೆಹೋವನ ನುಡಿ.


ಆತನ ಶ್ವಾಸವು (ಆತ್ಮ) ಒಂದು ಮಹಾನದಿಯಂತಿರುವದು. ಅದರ ನೀರು ಕುತ್ತಿಗೆಯ ತನಕ ಏರುವದು. ಯೆಹೋವನು ಜನಾಂಗಗಳಿಗೆ ನ್ಯಾಯತೀರಿಸುವನು. ಅವುಗಳನ್ನು ಜರಡಿಯಿಂದ ಜಾಲಾಡಿಸುವನು. ಯೆಹೋವನು ಅವುಗಳನ್ನು ನಿಯಂತ್ರಿಸುವನು. ಅದು ಪ್ರಾಣಿಗಳನ್ನು ನಿಯಂತ್ರಿಸುವ ಬಾಯಿಯಲ್ಲಿ ಹಾಕುವ ಕಡಿವಾಣದಂತಿರುವದು.


ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಆ ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಕೃತ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.


“‘ಆದರೆ ನಾನು ನಿನ್ನ ದವಡೆಗಳಿಗೆ ಕೊಂಡಿಗಳನ್ನು ಸಿಕ್ಕಿಸುವೆನು. ನೈಲ್ ನದಿಯ ಮೀನುಗಳು ನಿನ್ನ ಪೊರೆಗಳಿಗೆ ಸಿಲುಕಿಕೊಳ್ಳುವವು.


ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.


ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.


“ಯೆಹೂದದ ಅರಸನಾದ ಹಿಜ್ಕೀಯನಿಗೆ ನೀವು ಹೀಗೆ ಹೇಳಬೇಕು: ‘ನೀನು ನಂಬುವ ದೇವರಿಂದ ನೀನು ಮೋಸ ಹೋಗಬೇಡ. “ಜೆರುಸಲೇಮ್ ಅಶ್ಶೂರದ ಅರಸನ ಕೈಯಿಂದ ಸೋಲಿಸಲ್ಪಡಲು ದೇವರು ಅವಕಾಶ ಕೊಡುವುದಿಲ್ಲ” ಎಂದು ಹೇಳಬೇಡ.


“‘ಈಗ ನಾನು ಯೆಹೋವನ ಸಹಾಯವಿಲ್ಲದೆ ಈ ದೇಶವನ್ನು ನಾಶಮಾಡಲು ಬಂದೆನೆಂದು ನೆನಸುತ್ತೀರೋ? “ಎದ್ದುಹೋಗಿ ಈ ದೇಶದ ವಿರುದ್ಧ ಯುದ್ಧ ನಡೆಸಿ ಅದನ್ನು ಸಂಪೂರ್ಣವಾಗಿ ನಾಶಮಾಡು” ಎಂದು ಯೆಹೋವನು ನನಗೆ ಹೇಳಿದ್ದಾನೆ.’”


ಸೇನಾದಂಡನಾಯಕನು ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವುದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವುದೇನೆಂದರೆ: “‘ನೀನು ಯಾವುದರ ಮೇಲೆ ಭರವಸವಿಟ್ಟಿರುವೆ?


ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.


ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.


ಆಲಯದಲ್ಲಿ ಶತ್ರುಗಳು ಯುದ್ಧಾರ್ಭಟ ಮಾಡಿದರು. ಆಲಯದಲ್ಲಿ ತಮ್ಮ ಧ್ವಜಾರೋಹಣ ಮಾಡಿ ತಮ್ಮ ಜಯವನ್ನು ಸೂಚಿಸಿದರು.


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”


ಅದರ ಮೂಗಿನ ಮೂಲಕ ಹಗ್ಗವನ್ನಾಗಲಿ ದವಡೆಗಳ ಮೂಲಕ ಕೊಂಡಿಯನ್ನಾಗಲಿ ಹಾಕಬಲ್ಲೆಯಾ?


ಇಗೋ, ನಾನು ಒಂದು ಆತ್ಮವನ್ನು ಅಶ್ಶೂರದ ವಿರುದ್ಧವಾಗಿ ಕಳುಹಿಸುತ್ತೇನೆ. ದೇಶಕ್ಕೆ ಬರಲಿರುವ ಅಪಾಯದ ಬಗ್ಗ ಎಚ್ಚರಿಕೆಯ ವರದಿಯು ರಾಜನಿಗೆ ಬರುತ್ತದೆ. ಅದನ್ನು ಕೇಳಿ ಅವನು ತನ್ನ ದೇಶಕ್ಕೆ ಹಿಂದಿರುಗುವನು. ಆಗ ಅವನ ದೇಶದಲ್ಲಿಯೇ ನಾನು ಅವನನ್ನು ಖಡ್ಗದಿಂದ ಸಂಹರಿಸುವೆನು.’” ಎಂದು ಹೇಳಿದನು.


ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು