Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:10 - ಪರಿಶುದ್ದ ಬೈಬಲ್‌

10 ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:10
12 ತಿಳಿವುಗಳ ಹೋಲಿಕೆ  

ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.


ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ. ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!


ಆ ಜನರು ಊಟವನ್ನು ನಿರಾಕರಿಸಿದ್ದರಿಂದ ಮರಣಾವಸ್ಥೆಗೆ ಬಂದರು.


ದೇವರೇ, ನನ್ನ ಜೀವನವು ಕೇವಲ ಉಸಿರೆಂಬುದನ್ನು ನೆನಸಿಕೋ, ನನ್ನ ಕಣ್ಣುಗಳು ಮತ್ತೆಂದಿಗೂ ಸುಖವನ್ನು ನೋಡುವುದಿಲ್ಲ.


ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.


“ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೋ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ?


ನಿನ್ನ ಕೆಲಸಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಆ ಸ್ಥಳಕ್ಕೆ ಹೋಗುತ್ತಿದ್ದೇವೆ.


ಹಿಜ್ಕೀಯನು ತನ್ನ ಕಾಯಿಲೆಯಿಂದ ಗುಣಹೊಂದಿದ ಬಳಿಕ ಬರೆದ ಪತ್ರ:


ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.


ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.


ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು